ಆ್ಯಪ್ನಗರ

ಬಾಗಪ್ಪ ಹೈದರಾಬಾದ್‌ಗೆ ಶಿಫ್ಟ್‌

ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿಯಿಂದ ಗಾಯಗೊಂಡು ಬಿಎಲ್ ಡಿಇ ಆಸ್ಪತ್ರೆ ಸೇರಿದ್ದ ಬಾಗಪ್ಪ ಹರಿಜನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ವಿಕ ಸುದ್ದಿಲೋಕ 9 Aug 2017, 2:42 pm
ವಿಜಯಪುರ: ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿಯಿಂದ ಗಾಯಗೊಂಡು ಬಿಎಲ್ ಡಿಇ ಆಸ್ಪತ್ರೆ ಸೇರಿದ್ದ ಬಾಗಪ್ಪ ಹರಿಜನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
Vijaya Karnataka Web bagappa shifted hyderabad hospital
ಬಾಗಪ್ಪ ಹೈದರಾಬಾದ್‌ಗೆ ಶಿಫ್ಟ್‌


ವೈದ್ಯರ ಸಲಹೆ ಇಲ್ಲದೆ ಭದ್ರತೆಯ ದೃಷ್ಟಿಯಿಂದ ಸಹಚರರು ಹಾಗೂ ಸಂಬಂಧಿಗಳು ಹೈದರಾಬಾದ್‌ನ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಗಪ್ಪ ಹರಿಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಕೃತಕ ಉಸಿರಾಟ ಅಳವಡಿಸಲಾಗಿದ್ದು, ಬಾಗಪ್ಪ ಚೇತರಿಸಿಕೊಳ್ಳಲು ಇನ್ನೂ ಒಂದು ವಾರದ ಅವಶ್ಯಕತೆಯಿದೆ ಎಂದು ಬಿಎಲ್ ಡಿಇ ಆಸ್ಪತ್ರೆಯ ವೈದ್ಯರು ಹೇಳಿದ್ದರು.

ದೇಹದಲ್ಲಿರುವ ನಾಲ್ಕು ಗುಂಡು ಹೊರ ತೆಗೆಯಲಾಗಿದ್ದು, ಇನ್ನು ಎರಡು ದಿನಗಳ ಕಾಲ ಐಸಿಯುನಲ್ಲಿ ಇಡಲಾಗುವುದು ಎಂದು ಆಸ್ಪತ್ರೆಯ ಅಧೀಕ್ಷಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ತಿಳಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ