ಆ್ಯಪ್ನಗರ

ಸಿಡಿದೆದ್ದ ಯತ್ನಾಳ್‌, ‘ಸಿ.ಡಿ’ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದವರಿಗೆ ಸಚಿವ ಸ್ಥಾನ! ಬಿಎಸ್‌ವೈ ವಿರುದ್ಧ ಗಂಭೀರ ಆರೋಪ

ಸಂಪುಟ ವಿಸ್ತರಣೆ ಘೋಷಣೆ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 13 Jan 2021, 3:16 pm
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ತಿರುಗಿಬಿದ್ದಿದ್ದಾರೆ. ಸಚಿವ ಸ್ಥಾನ ಪಡೆದುಕೊಂಡ ಮೂವರು ಸಿ.ಡಿ ತೋರಿಸಿ, ಹಣ ನೀಡುವ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.
Vijaya Karnataka Web basana gowda pateel yatnal


ವಿಜಯಪುರದಲ್ಲಿ ಬುಧವಾರ ಮಾತನಾಡಿದ ಅವರು, ಬ್ಲ್ಯಾಲ್ ಮೇಲ್ ಮಾಡಿ ಹಣ ನೀಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೂವರ ಪೈಕಿ ಓರ್ವ ಸಿಡಿ ಹಾಗೂ ಹಣ ಎರಡನ್ನು ಮುಂದಿಟ್ಟು ಸಚಿವ ಸ್ಥಾನವನ್ನು ಪಡೆದಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಲಿಂಗಾಯತ ಸಮುದಾಯವನ್ನು ತೋರಿಸಿ ಅಮಿತ್‌ ಶಾ ಹಾಗೂ ಕೇಂದ್ರ ವರಿಷ್ಠರ ಒಪ್ಪಿಗೆ ಇಲ್ಲದಿದ್ದರೂ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ ಎಂದಿದ್ದಾರೆ.

ಸೋತ ಯೋಗೀಶ್ವರ್ ಗೆ ಯಾಕೆ ಮಂತ್ರಿಗಿರಿ: ಶಾಸಕ ತಿಪ್ಪಾರೆಡ್ಡಿ ಆಕ್ರೋಶ

ಬಿಎಸ್‌ವೈ ಹಾಗೂ ವಿಜಯೇಂದ್ರ ಕಾಂಗ್ರೆಸ್‌ ಅವರನ್ನು ಖರೀದಿ ಮಾಡಿದ್ದಾರೆ. ಕಾಂಗ್ರೆಸ್ ಸತ್ತೋಗಿದೆ. ವಿರೋಧ ಪಕ್ಷ ಬಿಎಸ್‌ವೈ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಸಿದ್ದರಾಮಯ್ಯ, ಡಿಕೆಶಿ, ಜಮೀರ್ ಬಿಎಸ್‌ವೈ ಜೊತೆಗಿದ್ದಾರೆ. ಕೆಲ ದಿನಗಳ ಹಿಂದೆ ಮೂವರು ನನ್ನನ್ನು ಭೇಟಿ ಮಾಡಿದ್ದರು. ಬಿಎಸ್‌ವೈ ಪದಚ್ಯುತಿಗೊಳಿಸೋಣ ಎಂದಿದ್ದರು. ಈ ಪೈಕಿ ಒಬ್ಬರನ್ನು ರಾಜಕೀಯ ಕಾರ್ಯದರ್ಶಿ ಆಗಿ ಮಾಡಿದ್ದಾರೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.

ಸಂಪುಟ ವಿಸ್ತರಣೆ ಎಫೆಕ್ಟ್‌: ಸಚಿವ ಸ್ಥಾನಕ್ಕೆ ಹೆಚ್‌. ನಾಗೇಶ್ ರಾಜೀನಾಮೆ!

ಬಿಎಸ್‌ವೈನವರೇ ನಿಮ್ಮ ಅಂತ್ಯ ಪ್ರಾರಂಭವಾಗಿದೆ!

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರೇ ನಿಮ್ಮ ಅಂತ್ಯ ಪ್ರಾರಂಭವಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ. ಸಂಕ್ರಾಂತಿಯೊಂದಿಗೆ, ಉತ್ತರಾಯಣದೊಂದಿಗೆ ನಿಮ್ಮ ಅಂತ್ಯ ಆರಂಭ ಆಗಲಿದೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.

ಬಿಎಸ್‌ವೈ ಲಿಂಗಾಯತ ಸಮುದಾಯದ ಮರ್ಯಾದೆ ತೆಗೆಯುತ್ತಿದ್ದಾರೆ. ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಕೇಂದ್ರದ ವಿರುದ್ಧ ಬಂಡಾಯ ಏಳಬೇಕು ಎಂಬ ಉದ್ದೇಶದಿಂದ 83 ಕೋಟಿ ಹಣವನ್ನು ಮಠಗಳಿಗೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ನೈತಿಕತೆ ಇದ್ದರೆ ಬಿಎಸ್‌ವೈ ರಾಜೀನಾಮೆ ನೀಡಿ, ಹೈಕೋರ್ಟ್‌ನಲ್ಲಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಇದೆ. ಆಂದ್ದರಿಂದ ಈ ಕೂಡಲೇ ರಾಜೀನಾಮೆ ಕೊಡಿ ಎಂದು ಅವರು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ