ಆ್ಯಪ್ನಗರ

ಕುಮಾರಸ್ವಾಮಿ 'ಪಟಾಕಿಪುಡಿ' ಹೇಳಿಕೆಗೆ ಬೆಂಬಲ ಸೂಚಿಸಿದ ಬಸವರಾಜ ಹೊರಟ್ಟಿ

ಮಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಬಗ್ಗೆ ಸತ್ಯಾಸತ್ಯತೆ ಹಾಗೂ ಪೊಲೀಸ್ ಭದ್ರತೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಾಜಿ ಸಿಎಂ ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಬೆಂಬಲಿಸಿದ್ದಾರೆ.

Vijaya Karnataka Web 21 Jan 2020, 6:28 pm
ವಿಜಯಪುರ: ಮಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಬಗ್ಗೆ ಸತ್ಯಾಸತ್ಯತೆ ಹಾಗೂ ಪೊಲೀಸ್ ಭದ್ರತೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಾಜಿ ಸಿಎಂ ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಬೆಂಬಲಿಸಿದ್ದಾರೆ.
Vijaya Karnataka Web basavaraj horatti


ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿರುವುದರಲ್ಲಿ ತಪ್ಪಿಲ್ಲ. ಭದ್ರತೆಯಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ವೈಫಲ್ಯಕ್ಕೆ ಅಧಿಕಾರಿಗಳೇ ಹೊಣೆ ಎಂದು ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆಯಡಿ ನೆರೆ ದೇಶದ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವ ಬದಲು ದೇಶದಲ್ಲಿನ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ನೀಡಬೇಕು. ನಮ್ಮ ಮನೆಯವರಿಗಿಂತ ಪಕ್ಕದ ಮನೆಯವರು ಅಂದವಾಗಿ ಕಾಣುತ್ತಾರೆ. ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ ಈಡೇರಿಸದ ಸರ್ಕಾರ, ಬೇರೆ ದೇಶಗಳ ಅಲ್ಪಸಂಖ್ಯಾತರಿಗೆ ಮಣೆ ಹಾಕುತ್ತಿದೆ ಇಲ್ಲಿರುವವರಿಗೇ ಸರಿಯಾದ ವ್ಯವಸ್ಥೆ ಇಲ್ಲ. ಬೇರೆಯವರಿಗೆ ಮಣೆ ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್‌ನಲ್ಲಿ ಪತ್ತೆಯಾಗಿದ್ದು ಸಜೀವ ಬಾಂಬ್‌ ಅಲ್ಲ ಬದಲಾಗಿ ಪಟಾಕಿ ತಯಾರಿಸಲು ಬಳಸುವ ಪೌಡರ್‌ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು.

ಮಂಗಳೂರಿನಲ್ಲಿ ಸಿಕ್ಕಿದ್ದು ಸಜೀವ ಬಾಂಬ್‌ ಅಲ್ಲ ! ಪಟಾಕಿ ಪೌಡರ್ - ಎಚ್‌ಡಿಕೆ ‘ಸ್ಫೋಟಕ ’ ಹೇಳಿಕೆ

ಲಿಂಗಾಯತರ ವಿಶೇಷ ಮೀಸಲಾತಿಗೆ ಆಗ್ರಹ
ನೆರೆಯ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿ ಲಿಂಗಾಯತರಿಗೆ ಮೀಸಲಾತಿ ನೀಡಬೇಕು ಬಸವರಾಜ್ ಹೊರಟ್ಟಿ ಆಗ್ರಹಿಸಿದರು. ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರ ನೀಡಿದಂತೆ, ಕರ್ನಾಟಕದಲ್ಲೂ ಮೀಸಲಾತಿ ದೊರೆಯಬೇಕು. ಇದರಿಂದ ಶಿಕ್ಷಣ ಉದ್ಯೋಗ ಕ್ಷೇತ್ರದಲ್ಲಿ ಅನಕೂಲವಾಗುತ್ತದೆ ಎಂದು ತಮ್ಮ ಬೇಡಿಕೆಯನ್ನು ಪ್ರತಿಪಾದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ