ಆ್ಯಪ್ನಗರ

ಲೆಕ್ಕ ಎಲ್ಲರಿಗೂ ಕೊಟ್ಟೇ ಕೊಡುತ್ತೇವೆ: ಸಿದ್ದರಾಮಯ್ಯಗೆ ಬಿಸಿ ಪಾಟೀಲ್‌ ಟಾಂಗ್‌

ಲೆಕ್ಕ ಎಲ್ಲರಿಗೂ ಕೊಟ್ಟೇ ಕೊಡುತ್ತೇವೆ.ಲೆಕ್ಕ ಕೊಡದೇ ನಾವು ಎಲ್ಲಿಯೂ ಹೋಗುವುದಿಲ್ಲ. ಕೋವಿಡ್ ಚಿಕಿತ್ಸೆ ಖರ್ಚುವೆಚ್ಚದ ಬಗ್ಗೆ ಸರಕಾರ ಖಂಡಿತ ಲೆಕ್ಕ ಕೊಡುತ್ತದೆ. ಅದು ನ್ಯಾಯಯುತವೂ ಹೌದು‌ ಎಂದು ಬಿಸಿ ಪಾಟೀಲ್‌ ತಿಳಿಸಿದರು.

Vijaya Karnataka Web 11 Jul 2020, 3:03 pm
ಬೆಂಗಳೂರು: ಕೊರೊನಾ ನಿಯಂತ್ರಣ ಸಂಬಂಧ ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಲೆಕ್ಕ ಕೊಡಿ ಎನ್ನುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೃಷಿ ಸಚಿವ ಬಿಸಿ ಪಾಟೀಲ್‌ ಟಾಂಗ್‌ ಕೊಟ್ಟಿದ್ದಾರೆ.
Vijaya Karnataka Web ಬಿಸಿ ಪಾಟೀಲ್‌
ಬಿಸಿ ಪಾಟೀಲ್‌


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಕೃಷಿ ಸಚಿವ ಬಿಸಿ ಪಾಟೀಲ್‌ ಮಾತನಾಡಿದರು.

ಲೆಕ್ಕ ಎಲ್ಲರಿಗೂ ಕೊಟ್ಟೇ ಕೊಡುತ್ತೇವೆ.ಲೆಕ್ಕ ಕೊಡದೇ ನಾವು ಎಲ್ಲಿಯೂ ಹೋಗುವುದಿಲ್ಲ. ಕೋವಿಡ್ ಚಿಕಿತ್ಸೆ ಖರ್ಚುವೆಚ್ಚದ ಬಗ್ಗೆ ಸರಕಾರ ಖಂಡಿತ ಲೆಕ್ಕ ಕೊಡುತ್ತದೆ. ಅದು ನ್ಯಾಯಯುತವೂ ಹೌದು‌ ಎಂದರು.

ಕಾಂಗ್ರೆಸ್‌ವರು ಲೆಕ್ಕಕೊಡಿ ಅಭಿಯಾನ ಮಾಡುವುದಕ್ಕಿಂತ ಜಾಗೃತ ಅಭಿಯಾನ ಮಾಡಿದರೆ ಒಳ್ಳೆಯದು. ಕಾಂಗ್ರೆಸ್ ಮಾಡುತ್ತಿರುವ ಆರೋಪವೆಲ್ಲವೂ ಸುಳ್ಳು
ಎಂದರು.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ‌ ಮಾಡುತ್ತಿದೆ.ರಾಜಕೀಯ ಸುಳ್ಳು ಆರೋಪ ಬಿಟ್ಟು ಕಾಂಗ್ರೆಸ್ ನಾಯಕರು ಕೂಡ ನಮ್ಮ ಜೊತೆಗೆ ಕೈ ಜೋಡಿಸಬೇಕು ಎಂದು ಕೃಷಿ ಸಚಿವ ಬಿಸಿ ಪಾಟೀಲ್‌ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ