ಆ್ಯಪ್ನಗರ

ವಿಜಯಪುರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ : ನಾಲ್ವರು ಬೈಕ್ ಸವಾರರ ಸಾವು

ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಬೈಕ್‌ಗೆ ಬುಲೆರೋ ಡಿಕ್ಕಿ ಹೊಡೆದಿದ್ದರಿಂದಾಗಿ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ಯಕ್ಕುಂಡಿ-ಅರ್ಜುಣಗಿ ಮಧ್ಯೆ ಸಂಜೆ ಸಂಭವಿಸಿದೆ.

Vijaya Karnataka Web 26 Nov 2019, 10:40 pm
ವಿಜಯಪುರ : ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಬೈಕ್‌ಗೆ ಬುಲೆರೋ ಡಿಕ್ಕಿ ಹೊಡೆದಿದ್ದರಿಂದಾಗಿ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ಯಕ್ಕುಂಡಿ-ಅರ್ಜುಣಗಿ ಮಧ್ಯೆ ಸಂಜೆ ಸಂಭವಿಸಿದೆ.
Vijaya Karnataka Web road accident
ಸಾಂದರ್ಭಿಕ ಚಿತ್ರ


ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮದ ಹಣಮಂತ ಮೂಡಲಗಿ (48)ಹಾಗೂ ತಿಗಣಿಬಿದರಿ ಗ್ರಾಮದ ತುಕಾರಾಂ ಸಿಂಧೆ (50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು.

ಮಹಾರಾಷ್ಟ್ರಕ್ಕೆ ಉದ್ದವ್‌ ಠಾಕ್ರೆ ಹೊಸ ಸಿಎಂ : ಡಿ.1ಕ್ಕೆ ಪ್ರಮಾಣವಚನ ಸ್ವೀಕಾರ ಸಾಧ್ಯತೆ

ಬೈಕ್‌ಗೆ ಡಿಕ್ಕಿ ಹೊಡೆಸಿದ ಆರೋಪಿ ಬುಲೇರೋ ಚಾಲಕ ಪರಾರಿಯಾಗಿದ್ದಾನೆ. ಆರೋಪಿ ಬುಲೇರೋ ಚಾಲಕ ಬಬಲೇಶ್ವರದಿಂದ ಜಮಖಂಡಿಗೆ ಕಡೆಗೆ ಹೊರಟಿದ್ದ. ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದ್ದರಿಂದಾಗಿ ಸವಾರರಿಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಬಬಲೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಅರಕೇರಿ ಬಳಿ ಎರಡು ಸಾವು : ವಿಜಯಪುರ ತಾಲೂಕಿನ ಅರಕೇರಿ ಗ್ರಾಮದ ಅಮೋಘಸಿದ್ದ ದೇವರ ಜಾತ್ರೆಯಿಂದ ಮರಳುತ್ತಿದ್ದ ಬೈಕ್‌ಗೆ ಇನ್ನೊಂದು ಬೈಕ್ ಡಿಕ್ಕಿ ಹೊಡೆದಿದ್ದರಿಂದ ಸವಾರಿಬ್ಬರು ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಭೂತನಾಳ ಕೆರೆ ಬಳಿ ರಾತ್ರಿ 8 ಗಂಟೆಗೆ ಸಂಭವಿಸಿದೆ.

ರಾಜ್ಯದಲ್ಲಿ 100 ಗಡಿ ದಾಟಿದ ಈರುಳ್ಳಿ ಬೆಲೆ: ಬೆಳೆಗಾರರಿಗೆ ಖುಷಿ, ಗ್ರಾಹಕರಿಗೆ ಕಣ್ಣೀರು

ಬರಟಗಿ ತಾಂಡೆ 3 ರ ನಿವಾಸಿಗಳಾದಸಂದೀಪ ಮಾನಸಿಂಗ್ ರಜಪೂತ (19) ಸ್ಥಳದಲ್ಲೇ ಮೃತಪಟ್ಟರೇ, ರೋಶನ್ ಚಂದ್ರಶೇಖರ ರಾಠೋಡ (19) ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಅಸುನೀಗಿದ್ದಾನೆ. ಗಾಯಗೊಂಡ ಇನ್ನೊಂದು ಬೈಕ್ ಸವಾರ ನಿಂಗಪ್ಪ‌ ಮೋರೆ ಎಂಬಾತನನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ