ಆ್ಯಪ್ನಗರ

ಸಾವಿನ ಮನೆಯಲ್ಲಿ ಬೇಳೆ ಬೇಯಿಸುವ ಬಿಜೆಪಿ: ಸಿಎಂ

ಬಿಜೆಪಿಯವರು ಸಾವಿನ ಮನೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Vijaya Karnataka Web 21 Dec 2017, 11:49 am
ವಿಜಯಪುರ: ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಬಿಜೆಪಿಗೆ ಸತ್ಯ ಹೇಳುವುದು ಗೊತ್ತಿಲ್ಲ, ಬರೀ ಸುಳ್ಳು ಹೇಳುತ್ತಾರೆ. ಬಿಜೆಪಿಯವರು ಸಾವಿನ ಮನೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Vijaya Karnataka Web bjp play with girls death case
ಸಾವಿನ ಮನೆಯಲ್ಲಿ ಬೇಳೆ ಬೇಯಿಸುವ ಬಿಜೆಪಿ: ಸಿಎಂ


ಸರಿಯಾದ ರೀತಿ ತನಿಖೆಗೆ ಆದೇಶ ನೀಡಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಹದಾಯಿ ವಿಚಾರವಾಗಿ ಬಿಜೆಪಿ ವಿರುದ್ದ ಸಿಎಂ ವಾಗ್ದಾಳಿ ನಡೆಸಿ, ವರ್ಷಗಳಿಂದ ಪ್ರತಿಭಟನೆ ನಡೆದರೂ ಬಿಜೆಪಿ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ನಾನೂ ನಿಯೋಗ ಕರೆದುಕೊಂಡು ಹೋದರೂ ಬಿಜೆಪಿಯವರು ಬೆಂಬಲ‌ ನೀಡಲಿಲ್ಲ. ಇದೀಗ ಚುನಾವಣಾ ವಿಚಾರವಾಗಿ ಮಹದಾಯಿ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ಗೋವಾ ಸಿಎಂ ಜತೆ ಯಡಿಯೂರಪ್ಪ, ಅಮಿತ್ ಶಾ ಮಾತುಕತೆ ಮಾಡಿದರೆ ಮುಗಿಯತೇ, ಗೋವಾ ಸಿಎಂ ನನಗೆ ಪತ್ರ ಬರೆಯಬೇಕಲ್ಲವೇ, ಯಡಿಯೂರಪ್ಪ ಬಗೆಹರಿಸಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ