ಆ್ಯಪ್ನಗರ

ಬಸ್‌-ಟಿಪ್ಪರ್ ಅಪಘಾತ: ಮಗು ಸಹಿತ ಇಬ್ಬರ ಸಾವು

ತಾಳಿಕೋಟೆಯ ಕೊಣ್ಣೂರ ಕ್ರಾಸ್ ಬಳಿ ಟಿಪ್ಪರ್ ಮತ್ತು ರಾಜ್ಯ ಸಾರಿಗೆ ಸಂಸ್ಥೆ ಬಸ್ ನಡುವೆ ಡಿಕ್ಕಿಯಾಗಿ 2 ವರ್ಷದ ಮಗು ಸೇರಿದಂತೆ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.

Vijaya Karnataka Web 23 Aug 2018, 8:23 pm
ವಿಜಯಪುರ: ತಾಳಿಕೋಟೆಯ ಕೊಣ್ಣೂರ ಕ್ರಾಸ್ ಬಳಿ ಟಿಪ್ಪರ್ ಮತ್ತು ರಾಜ್ಯ ಸಾರಿಗೆ ಸಂಸ್ಥೆ ಬಸ್ ನಡುವೆ ಡಿಕ್ಕಿಯಾಗಿ 2 ವರ್ಷದ ಮಗು ಸೇರಿದಂತೆ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.
Vijaya Karnataka Web Vijayapura accident.


ತಾಳಿಕೋಟೆ ಕೆನರಾ ಬ್ಯಾಂಕ್ ಕ್ಯಾಷಿಯರ್ ವಿನೋದ ಬಾಟಲಿ (28) ಮೃತಪಟ್ಟವರು. ಮಗುವಿನ ಹೆಸರು ತಿಳಿದುಬಂದಿಲ್ಲ.

ಮರಳು ತುಂಬಿದ ಟಿಪ್ಪರ್ ಟೈರ್ ಒಡೆದು ನಿಯಂತ್ರಣ ತಪ್ಪಿದೆ. ಟಿಪ್ಪರ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ರಸ್ತೆ ಬದಿಯ ಕಲ್ಲಿಗೆ ಬಡಿದು ಪಲ್ಟಿಯಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ