ವಿಜಯಪುರ: ಬಬಲೇಶ್ವರ ತಾಲೂಕಿನಲ್ಲಿ ಕೆಲ ದಿನಗಳ ಹಿಂದೆ ಚಿರತೆ ಬೋನಿಗೆ ಹಾಕಿದ ಬೆನ್ನಲ್ಲೇ ಜೈನಾಪುರ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿದ್ದು, ಮತ್ತೆ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.
ಗ್ರಾಮದ ಪ್ರಶಾಂತ ದೇಸಾಯಿ ಎಂಬುವರ ಕಬ್ಬಿನ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿವೆ.
ಕಳೆದ ಕೆಲವು ತಿಂಗಳುಗಳ ಹಿಂದೆ ಇಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಆಗ ಅರಣ್ಯ ಇಲಾಖೆಯವರು ಬೋನಿಗೆ ಹಾಕಿದ್ದರು. ಆದರೆ ಈಗ ಮತ್ತೆ ಚಿರತೆ ಮರಿಗಳು ಪತ್ತೆಯಾಗಿದ್ದರಿಂದ ಗಂಡು-ಹೆಣ್ಣು ಚಿರತೆಗಳು ಈ ಭಾಗದಲ್ಲಿ ಇರಬಹುದೆಂಬ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.
ಪತ್ತೆಯಾದ ಎರಡೂ ಚಿರತೆ ಮರಿಗಳನ್ನು ರಕ್ಷಿಸಿದ ಕಬ್ಬಿನ ಗದ್ದೆಯ ಮಾಲೀಕ ಪ್ರಶಾಂತ ದೇಸಾಯಿ ಬಳಿಕ ಅವುಗಳನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಗ್ರಾಮದ ಪ್ರಶಾಂತ ದೇಸಾಯಿ ಎಂಬುವರ ಕಬ್ಬಿನ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿವೆ.
ಕಳೆದ ಕೆಲವು ತಿಂಗಳುಗಳ ಹಿಂದೆ ಇಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಆಗ ಅರಣ್ಯ ಇಲಾಖೆಯವರು ಬೋನಿಗೆ ಹಾಕಿದ್ದರು. ಆದರೆ ಈಗ ಮತ್ತೆ ಚಿರತೆ ಮರಿಗಳು ಪತ್ತೆಯಾಗಿದ್ದರಿಂದ ಗಂಡು-ಹೆಣ್ಣು ಚಿರತೆಗಳು ಈ ಭಾಗದಲ್ಲಿ ಇರಬಹುದೆಂಬ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.
ಪತ್ತೆಯಾದ ಎರಡೂ ಚಿರತೆ ಮರಿಗಳನ್ನು ರಕ್ಷಿಸಿದ ಕಬ್ಬಿನ ಗದ್ದೆಯ ಮಾಲೀಕ ಪ್ರಶಾಂತ ದೇಸಾಯಿ ಬಳಿಕ ಅವುಗಳನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.