ಆ್ಯಪ್ನಗರ

ಕಾಂಗ್ರೆಸ್‌, ಜೆಡಿಎಸ್‌ ಮುಳುಗುತ್ತಿರುವ ಹಡಗು: ಈಶ್ವರಪ್ಪ

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮತ್ತೆ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಏಕೆಂದರೆ ಎರಡೂ ಪಕ್ಷಗಳು ಮುಳುಗುತ್ತಿರುವ ಹಡಗುಗಳು ಎಂದು ಈಶ್ವರಪ್ಪ ಹೇಳಿದ್ದಾರೆ.

Vijaya Karnataka Web 3 Dec 2019, 5:46 pm
ವಿಜಯಪುರ: ಕಾಂಗ್ರೆಸ್ ಹಾಗೂ ಜೆಡಿಎಸ್ ಮುಳುಗುತ್ತಿರುವ ಹಡಗುಗಳು. ಒಬ್ಬರಿಗೊಬ್ಬರು ಅಪ್ಪಿಕೊಂಡು ಇಬ್ಬರೂ ಮುಳುಗುತ್ತಾರೆ, ಇದು ಆ ಪಕ್ಷಗಳ ಪರಿಸ್ಥಿತಿ, ಮುಳುಗುವ ಸಂದರ್ಭದಲ್ಲಿ ಬದುಕುವ ಕಾರಣಕ್ಕಾಗಿ ಒಬ್ಬರಿಗೊಬ್ಬರು ಅಪ್ಪಿಕೊಳ್ಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇಬ್ಬರೂ ಬದುಕುವದಿಲ್ಲ ಎಂದು ಸಚಿವ ಕೆಎಸ್‌ ಈಶ್ವರಪ್ಪ ತಿಳಿಸಿದರು.
Vijaya Karnataka Web ಕೆಎಸ್‌ ಈಶ್ವರಪ್ಪ
ಕೆಎಸ್‌ ಈಶ್ವರಪ್ಪ


ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಸಚಿವ ಕೆಎಸ್‌ ಈಶ್ವರಪ್ಪ ಮಾತನಾಡಿದರು.

ಉಪ ಚುನಾವಣೆಯ ಬಳಿಕ ಜೆಡಿಎಸ್ ಜತೆಗೂಡಿ ಕಾಂಗ್ರೆಸ್ ಸರಕಾರ ರಚಿಸುವ ಕುರಿತು ಇರುವ ವದಂತಿಗೆ ಈಶ್ವರಪ್ಪ ಈ ರೀತಿ ಪ್ರತಿಕ್ರಿಯೆ ನೀಡಿದರು.

ಜೆಡಿಎಸ್ ಜತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ಬಿಎಸ್‌ ಯಡಿಯೂರಪ್ಪ ಬದಲಿಗೆ‌ ಬಿ ಎಲ್ ಸಂತೋಷ ಸಿಎಂ ಆಗುತ್ತಾರೆ ಎಂಬ ವದಂತಿಗಳ ಕುರಿತು ಸುದ್ದಿಗಾರರು ಪ್ರಶ್ನಿಸಿದರು.

ಇದಕ್ಕೆ ಗರಂ ಆದ ಈಶ್ವರಪ್ಪ, ಇದರಲ್ಲಿ ಅರ್ಥವೇ ಇಲ್ಲ. ಯಡಿಯೂರಪ್ಪ ಮುಂದಿನ ಮೂರು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ. ಸಂತೋಷ ಮುಖ್ಯಮಂತ್ರಿ ಆಗುತ್ತಾರೆಂದು ತಲೆ ಕೆಟ್ಟವರೇ ಹೇಳಬೇಕಲ್ಲ. ಮತ್ಯಾರು ಹೇಳಲು ಸಾದ್ಯ ಎಂದರು.

ಏನೇನೋ ಪ್ರಶ್ಮೆ ಕೇಳಿದರೆ ನಾನೇನು ಹೇಳಲಿ. ಮುಂದಿನ ಅವಧಿಗೆ ಯಡಿಯೂರಪ್ಪ ನವರೇ ಸಿಎಂ ಆಗಿರುತ್ತಾರೆ ಅನುಮಾನ ಬೇಡ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ