ಆ್ಯಪ್ನಗರ

ಕರ್ನಾಟಕ ಸ್ವರ್ಗ ಆಯ್ತಾ? ಬಿಎಸ್‌ವೈಗೆ ಸಿದ್ದರಾಮಯ್ಯ ಪ್ರಶ್ನೆ

ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕರ್ನಾಟಕ ಸ್ವರ್ಗ ಆಗಲಿದೆ ಎಂದು ಸಿ.ಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದರು. ಆದರೆ ಕರ್ನಾಟಕ ಸ್ವರ್ಗ ಆಗಿದೆಯಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Vijaya Karnataka Web 25 Feb 2020, 12:21 pm
ವಿಜಯಪುರ: 'ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಕರ್ನಾಟಕ ಸ್ವರ್ಗ ಆಗುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಹಾಗಾದರೆ, ಕರ್ನಾಟಕ ಸ್ವರ್ಗ ಆಯ್ತಾ' ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
Vijaya Karnataka Web congress leader siddaramaiah slams at chief minister bs yeddyurappa
ಕರ್ನಾಟಕ ಸ್ವರ್ಗ ಆಯ್ತಾ? ಬಿಎಸ್‌ವೈಗೆ ಸಿದ್ದರಾಮಯ್ಯ ಪ್ರಶ್ನೆ


ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಬಿಜೆಪಿಯ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ಸತ್ಯ. ಆದರೆ, ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಾರೆ' ಎಂದರು.

'ಕಾಂಗ್ರೆಸ್ ಮುಳುಗುತ್ತಿರುವ ಹಡಗು' ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ, 'ಕಟೀಲ್ ಗೆ ರಾಜಕೀಯ ಜ್ಞಾನ ಇಲ್ಲ, ಅವರಿಗೆ ಅಧ್ಯಕ್ಷ ಸ್ಥಾನ ಹೇಗೆ ಕೊಟ್ಟರೋ ಗೊತ್ತಿಲ್ಲ' ಎಂದು ಲೇವಡಿ ಮಾಡಿದರು.

ಮಹದಾಯಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಚಿವರ ಭೇಟಿಗೆ ರಮೇಶ್ ಜಾರಕಿಹೊಳಿ ನಿರ್ಧಾರ

'ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಉತ್ತರ, ದಕ್ಷಿಣ ಕರ್ನಾಟಕದವರನ್ನು ಪರಿಗಣಿಸುವ ಸಂಬಂಧ ಚರ್ಚೆಗಳು ನಡೆದಿವೆ' ಎಂದು ಹೇಳಿದರು.

'ಡೊನಾಲ್ಡ್ ಟ್ರಂಪ್ ಗೆ ಭದ್ರತೆ ಕೊಡೋದು ತಪ್ಪಲ್ಲ. ಟ್ರಂಪ್ ಗೆ ತೋರಿಸಲು ಬಿಜೆಪಿ ಬಳಿ ಏನೂ ಇಲ್ಲ. ಅವರು ಅಭಿವೃದ್ಧಿಯನ್ನೇ ಮಾಡಿಲ್ಲ. ಹೀಗಾಗಿ, ತಾಜಮಹಲ್, ಸಾಬರಮತಿ ಆಶ್ರಮ ತೋರಿಸಿದ್ದಾರೆ' ಎಂದು ವ್ಯಂಗ್ಯವಾಡಿದರು.

'ಮಹದಾಯಿ ನೀರು ಹಂಚಿಕೆ ಸಂಬಂಧ ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಸಿಎಂ , ಸಂಸದರು ನಿಯೋಗ ತೆರಳಿ ಕೇಂದ್ರದ ಮೇಲೆ ಒತ್ತಡ ತರಬೇಕು' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ