ಆ್ಯಪ್ನಗರ

ವಿಜಯಪುರ ಜಿ.ಪಂ. ಅಧ್ಯಕ್ಷ ಸ್ಥಾನದ ಚುನಾವಣೆ; ಹೈಜಾಕ್ ಭಯದಲ್ಲಿ ಕಾಂಗ್ರೆಸ್ ಸದಸ್ಯರು..!

ವಿಜಯಪುರ ಜಿಲ್ಲಾ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ತಮ್ಮ ಸದಸ್ಯರು ಹೈಜಾಕ್ ಆಗುವ ಭಯದಲ್ಲಿ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಇದ್ದಾರೆ. ಈ ಸಂಬಂಧ ಆಯುಕ್ತರಿಗೆ ಪತ್ರ ಬರೆದಿರುವ ಕಾಂಗ್ರೆಸ್‌ ಮುಖಂಡರು ಸೂಕ್ತ ಭದ್ರತೆ ಒದಗಿಸುವಂತೆ ಕೇಳಿಕೊಂಡಿದ್ದಾರೆ.

Vijaya Karnataka Web 30 Jun 2020, 3:54 pm
ವಿಜಯಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಸದಸ್ಯರನ್ನು ಬಿಜೆಪಿಯವರು ಹೈಜಾಕ್‌ ಮಾಡುವ ಭಯದಲ್ಲಿ ಕಾಂಗ್ರೆಸ್‌ ಸದಸ್ಯರು ಇದ್ದಾರೆ.
Vijaya Karnataka Web Vijaypura district panchayath president election


ಇಂದು ಸಂಜೆ ಮೂರು ಗಂಟೆಗೆ ವಿಜಯಪುರ ಜಿಲ್ಲಾ ಪಂಚಾಯಿತಿ ಅದ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆ ಬಿಜೆಪಿ ಪಕ್ಷದ ಸದಸ್ಯರು ಕಾಂಗ್ರೆಸ್‌ ಸದಸ್ಯರನ್ನು ಹೈಜಾಕ್ ಮಾಡುವ ಭಯದಲ್ಲಿದ್ದು, ಕಾಂಗ್ರೆಸ್‌ ಸದಸ್ಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದ್ದಾರೆ.

ವಿಜಯಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ, ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಈ ಸಂಬಂಧ ಬೆಳಗಾವಿಯ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿರುವ ಕಾಂಗ್ರೆಸ್‌ ಸದಸ್ಯರು, ಕಾಂಗ್ರೆಸ್‌ ಸದಸ್ಯರಿಗೆ ಜೀವ ಭಯವಿದ್ದು, ಚುನಾವಣೆ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸದಸ್ಯರು ತಂಗಿರುವ ಖಾಸಗಿ ಹೋಟೆಲ್‌ನಿಂದ ಚುನಾವಣಾ ಸ್ಥಳಕ್ಕೆ ತೆರಳಲು ಮತ್ತು ಅಲ್ಲಿಂದ ವಾಪಸ್ ಹೋಟೆಲ್‌ಗೆ ಮರಳುವವರೆಗೂ ಭದ್ರತೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ವಿಜಯಪುರದಲ್ಲಿ ದಾಖಲೆ ಮಳೆಯಿಂದ ಜಲಾತಂಕ..! ಮನೆ ಕುಸಿತ, ಅಪಾರ ಬೆಳೆ ಹಾನಿ

ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಂದ ಆಯುಕ್ತರಿಗೆ ಪತ್ರ ರವಾನಿಸಲಾಗಿದ್ದು, ಈ ಪತ್ರಕ್ಕೆ ಶಾಸಕರಾದ ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಯಶವಂತರಾಯಗೌಡ ಪಾಟೀಲ್, ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ್ ಮತ್ತು ಪ್ರಕಾಶ ರಾಠೋಡ್ ಅವರಿಂದ ಪತ್ರಕ್ಕೆ ಸಹಿ ಹಾಕಿಸಲಾಗಿದೆ.

ರಾತ್ರೋ ರಾತ್ರಿ ಸುರಿದ ಮಳೆಯಿಂದಾಗಿ ಗದ್ದೆಗೆ ನುಗ್ಗಿದ ಅಪಾರ ಪ್ರಮಾಣದ ನೀರು

ಇನ್ನು ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರಿಗೂ ಈ ಮನವಿ ಪತ್ರವನ್ನು ರವಾನಿಸಲಾಗಿದ್ದು, ಸದ್ಯ ವಿಜಯಪುರ ಜಿಲ್ಲಾ ಪಂಚಾಯಿತಿ ಅದ್ಯಕ್ಷ ಸ್ಥಾನದ ಚುನಾವಣೆ ಭಾರೀ ಕುತೂಹಲ ಕೆರಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ