ಆ್ಯಪ್ನಗರ

2023ರಲ್ಲಿ 150 ಸೀಟು ಗೆಲ್ಲಲು ಈಗ ಮೂವರು ಡಿಸಿಎಂ ನೇಮಕ: ಲಕ್ಷ್ಮಣ ಸವದಿ

ಸಾರಿಗೆ ಇಲಾಖೆಯಲ್ಲಿ ಚಾಲಕ, ನಿರ್ವಾಹಕರು ದೊಡ್ಡ ಯಾವ ಅಸಮಾಧಾನ ಇಲ್ಲ, ಇದೇನಿದ್ದರೂ ಮಾಧ್ಯಮಗಳ ಸೃಷ್ಟಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

Vijaya Karnataka Web 30 Aug 2019, 7:57 pm
ವಿಜಯಪುರ: ಉಪ ಮುಖ್ಯಮಂತ್ರಿ ಹುದ್ದೆ ನನಗೆ ಬಯಸದೇ ಬಂದ ಭಾಗ್ಯ. ನಮ್ಮ ಪಕ್ಷದ ವರಿಷ್ಠರು ನನ್ನ ಸೇವೆ ಗುರುತಿಸಿ ಹುದ್ದೆ ನೀಡಿದ್ದಾರೆ. ಇದನ್ನು ಜನರಿಗಾಗಿ ಸದುಪಯೋಗ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
Vijaya Karnataka Web ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ


ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಲಕ್ಷ್ಮಣ ಸವದಿ ಮಾತನಾಡಿದರು.

2023ರಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉತ್ತಮ ಆಡಳಿತ ನೀಡಲು ಮೂರು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ರಚಿಸಲಾಗಿದೆ. 20 ವರ್ಷ ರಾಜ್ಯದಲ್ಲಿ ಬಿಜೆಪಿ ಗಟ್ಟಿಯಾಗಿ ನೆಲೆಯೂರಲು ಯೋಜನೆ ರೂಪಿಸಲಾಗಿದೆ ಎಂದು ಸವದಿ ಹೇಳಿದರು.

3 ವರ್ಷ 8 ತಿಂಗಳು ಸರಕಾರ ಉತ್ತಮ ಆಡಳಿತ ನೀಡಲಾಗುವುದು. 20 ವರ್ಷ ಬಿಜೆಪಿ ರಾಜ್ಯದಲ್ಲಿ ಗಟ್ಟಿ ತಯಾರಾಗಿರಲು ವರಿಷ್ಠ ನಾಯಕರು ಉತ್ತರ ಕರ್ನಾಟಕ್ಕೆ 2 ಡಿಸಿಎಂ ಕೊಟ್ಟಿದ್ದಾರೆ ಎಂದರು.

ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಹಾನಿ ಪ್ರಮಾಣ ಇನ್ನೂ ಹೆಚ್ಚಾಗಲಿದೆ. ಸಂತ್ರಸ್ತರಿಗೆ ತಾತ್ಕಾಲಿಕ ನೆರವು ನೀಡಲಾಗಿದೆ. ನಿರಾಶ್ರಿತರು ಬಾಡಿಗೆ ಮನೆಯಲ್ಲಿದ್ದರೆ 10 ತಿಂಗಳ ತನಕ 5 ಸಾವಿರ ರೂ. ಬಾಡಿಗೆ ನೀಡುತ್ತೇವೆ. ಕೇಂದ್ರ ನಾಯಕರಿಗೆ ಮನವರಿಕೆ ಮಾಡಿಕೊಂಡು ಹೆಚ್ಚಿನ ಪರಿಹಾರಕ್ಕೆ ಪ್ರಯತ್ನಿಸುತ್ತೇವೆ ಎಂದು ಸವದಿ ತಿಳಿಸಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಪಕ್ಷ ಅಧಿಕಾರದಲ್ಲಿರುವುದರಿಂದ ಸರ್ವಪಕ್ಷ ನಿಯೋಗ ಹೋಗುವ ವಿಚಾರ ಇಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಇರೋದು ಪ್ರತಿಪಕ್ಷದಲ್ಲಿ, ಹೀಗಾಗಿ ಎಲ್ಲದಕ್ಕೂ ಅವರ ವಿರೋಧವಿರುತ್ತದೆ. ಇದಕ್ಕೆ ತಲೆ ಕೆಡಿಸಿಕೊಳ್ಳಬೇಕಾಗಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ