ಆ್ಯಪ್ನಗರ

ಬರ ಮುಕ್ತ ಕರ್ನಾಟಕಕ್ಕೆ ಆದ್ಯತೆ

ವಿಜಯಪುರ: ರಾಜ್ಯದಲ್ಲಿ ನಿರಂತರ ಬರ ಎದುರಾಗುತ್ತಿದೆ. ಬರ ಮುಕ್ತ ಕರ್ನಾಟಕವನ್ನಾಗಿಸುವುದು ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಪರಿಹಾರ ಕಾರ್ಯ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅರಿಯಲು ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದರು.

Vijaya Karnataka 9 Jan 2019, 5:00 am
ವಿಜಯಪುರ: ರಾಜ್ಯದಲ್ಲಿ ನಿರಂತರ ಬರ ಎದುರಾಗುತ್ತಿದೆ. ಬರ ಮುಕ್ತ ಕರ್ನಾಟಕವನ್ನಾಗಿಸುವುದು ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಪರಿಹಾರ ಕಾರ್ಯ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅರಿಯಲು ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದರು.
Vijaya Karnataka Web drought free karnataka prefers
ಬರ ಮುಕ್ತ ಕರ್ನಾಟಕಕ್ಕೆ ಆದ್ಯತೆ


ವಿಜಯಪುರದಲ್ಲಿ ಮಂಗಳವಾರ ಬರ ಪರಿಹಾರ ಕಾಮಗಾರಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ವಿಮೆಗೆ ಸಂಬಂಧಿಸಿದಂತೆ ಕೆಲ ಕಂಪನಿಗಳು ಚೆಲ್ಲಾಟವಾಡುತ್ತಿವೆ. ಇದರಿಂದಾಗಿ ನೊಂದ ರೈತರಿಗೆ ಸರಿಯಾಗಿ ಪರಿಹಾರ ಸಿಗುತ್ತಿಲ್ಲ . ಬೆಳೆ ವಿಮೆ ಕೇಂದ್ರದ ಉತ್ತಮ ಯೋಜನೆಯಾಗಿದ್ದು , ಯೋಜನೆಯಲ್ಲಿ ನ್ಯೂನತೆ ಸರಿಪಡಿಸಲು ಕೇಂದ್ರದ ಜವಾಬ್ದಾರಿಯೂ ಇದೆ ಎಂದರು.

ಸಮ್ಮಿಶ್ರ ಸರಕಾರ ರಚನೆಯಾದಗಿನಿಂದಲೂ ಕೆಲವರು ಭವಿಷ್ಯ ನುಡಿಯತ್ತಲೇ ಇದ್ದಾರೆ. ಸಚಿವ ರೇವಣ್ಣ ಜವಾಬ್ದಾರಿಯುತ ವ್ಯಕ್ತಿ. ಅವರು ಯಾವುದೇ ವ್ಯತಿರಿಕ್ತ ಹೇಳಿಕೆ ನೀಡಿರಲ್ಲ. ಪರಸ್ಪರ ಹೊಂದಾಣಿಕೆಯಿಂದ ಆಡಳಿತ ನಡೆಸುವುದು ಮುಖ್ಯ.
ಆರ್‌.ವಿ.ದೇಶಪಾಂಡೆ, ಕಂದಾಯ ಸಚಿವ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ