ವಿಜಯಪುರ: ನಗರದಲ್ಲಿ ಶನಿವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನತೆ ಆತಂಕಗೊಂಡಿದೆ. ಬೆಳಗ್ಗೆ 8.18ರಿಂದ 8.20ರ ಸಮಯದಲ್ಲಿ ಮನೆಯಲ್ಲಿನ ಪಾತ್ರೆ ಅಲುಗಾಡಿದ ಹಾಗೂ ಭೂಮಿಯಲ್ಲಿ ಶಬ್ಧ ಹೊರಹೊಮ್ಮಿದ ಅನುಭವ ಆಗಿದ್ದರ ಬಗ್ಗೆ ಸಾರ್ವಜನಿಕರು ತಿಳಿಸಿದ್ದಾರೆ. ಜಲನಗರ, ಕೀರ್ತಿನಗರ, ಬಸ್ ನಿಲ್ದಾಣ ಮತ್ತಿತರ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ್ದರ ಮಾಹಿತಿ ಲಭ್ಯವಾಗಿದೆ. ಕಳೆದ ವಾರವೂ ಜಿಲ್ಲೆಯ ಹಲವೆಡೆ ಮಧ್ಯ ರಾತ್ರಿ 2 ಬಾರಿ ಭೂಮಿ ಕಂಪಿಸಿತ್ತು. ಕಳೆದ ಸಲ ಭೂಮಿ ಕಂಪನದ ಕೇಂದ್ರಬಿಂದು ಮಹಾರಾಷ್ಟ್ರದ ಕೊಲ್ಲಾಪುರ ಆಗಿದ್ದು, ರಿಕ್ಟರ್ ಮಾಪನದಲ್ಲಿ 3.9ರಷ್ಟು ದಾಖಲಾಗಿತ್ತು. ನೈಸರ್ಗಿಕ ವಿಕೋಪ ಕೇಂದ್ರದ ವಿಜ್ಞಾನಿಗಳ ತಂಡ ಜಿಲ್ಲೆಗಳಲ್ಲಿ ಭೇಟಿ ನೀಡಿ ಅಧ್ಯಯನ ನಡೆಸಿತ್ತು.
ದೇಶದ ವಿವಿಧೆಡೆ ಭೂಕಂಪ!
ಇನ್ನು ದೇಶದ ಕೆಲವೆಡೆ ಇಂದು ಭೂಕಂಪನದ ಅನುಭವ ಉಂಟಾಗಿದೆ. ಉತ್ತರಾಖಂಡದ ಜೋಶಿಮಠದಲ್ಲಿ ಭೂಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಇನ್ನು ಅಂಡಮಾನ್ ಮತ್ತು ನಿಕೋಬಾರ್ನ ದಿಗ್ಲಿಪುರದ ಉತ್ತರಕ್ಕೆ 137 ಕಿಮೀ ದೂರದಲ್ಲಿ ಭೂಕಂಪನ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ.
ಉತ್ತರಾಖಂಡದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು
ದೇಶದ ವಿವಿಧೆಡೆ ಭೂಕಂಪ!
ಇನ್ನು ದೇಶದ ಕೆಲವೆಡೆ ಇಂದು ಭೂಕಂಪನದ ಅನುಭವ ಉಂಟಾಗಿದೆ. ಉತ್ತರಾಖಂಡದ ಜೋಶಿಮಠದಲ್ಲಿ ಭೂಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಇನ್ನು ಅಂಡಮಾನ್ ಮತ್ತು ನಿಕೋಬಾರ್ನ ದಿಗ್ಲಿಪುರದ ಉತ್ತರಕ್ಕೆ 137 ಕಿಮೀ ದೂರದಲ್ಲಿ ಭೂಕಂಪನ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ.
ಉತ್ತರಾಖಂಡದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು