ಆ್ಯಪ್ನಗರ

ವಿಜಯಪುರ: ಸಮಸ್ಯೆ ಬಗೆಹರಿಸಿ, ಇಲ್ಲವಾದಲ್ಲಿ ದಯಾಮರಣ ನೀಡಿ; ನೊಂದ ರೈತನಿಂದ ಡಿಸಿಗೆ ಮನವಿ!

ದಯಾಮರಣಕ್ಕೆ ಅನುಮತಿ ನೀಡಬೇಕೆಂದು ಒತ್ತಾಯಿಸಿ ವಿಜಯಪುರ ತಾಲೂಕಿನ ಕತಕನಹಳ್ಳಿ ಗ್ರಾಮದ ರೈತ ಹೋರಾಟಗಾರರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದ್ದಾರೆ.

Vijaya Karnataka Web 13 Apr 2021, 5:47 pm
ವಿಜಯಪುರ: ಸಮಸ್ಯೆ ಬಗೆಹರಿಸಿ. ಇಲ್ಲವಾದಲ್ಲಿ ದಯಾಮರಣ ನೀಡಿ ಎಂದು ಒತ್ತಾಯಿಸಿ ರೈತನೊಬ್ಬ ಮುಖಂಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ತಾಲೂಕಿನ ಕತಕನಹಳ್ಳಿ ಗ್ರಾಮದ ನೊಂದ ರೈತ ಹಿರಗಪ್ಪ ಅಲ್ಲಾಪೂರ ಮಾತನಾಡಿ, ನನಗೆ 2 ಬ್ಯಾಂಕಿನ ಕಡೆ ಟ್ರ್ಯಾಕ್ಟರ್ ಗೆ‌ ಸಾಲ ಮಾಡಿದ್ದೆ. ಮಹೇಂದ್ರ ಕಂಪನಿಯವರು ದಬ್ಬಾಳಿಕೆ ಮಾಡಿ ಟ್ರ್ಯಾಕ್ಟರ್ ಟ್ರೈಲರ್‌ ತಗೆದುಕೊಂಡು ಹೋಗಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ ಬಳಿಕ ಮಹಿಂದ್ರ ಕಂಪನಿಯವರು ಟ್ರ್ಯಾಕ್ಟರ್ ಗೆ‌ ಹಾಗೂ ಹಣ ಕೊಡುತ್ತೇವೆ ಎಂದು ವಂಚಿಸಿದ್ದಾರೆ ಎಂದು ಆರೋಪಿಸಿದರು.

ಹಾಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಂದ್ರ ಕಂಪನಿಯ ವಿರುದ್ಧ ಕಾನೂನು ಕ್ರಮ ಕೈಗೊಂಡು, ನನ್ನ ಟ್ರ್ಯಾಕ್ಟರ್ ಗೆ‌ ಮರಳಿಸಬೇಕು. ಇಲ್ಲವಾದಲ್ಲಿ ನನಗೆ ದಯಾ ಮರಣಕ್ಕೆ ಅನುಮತಿ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಕಾರ್ಮಿಕ ಸಂಘಟನೆ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ಜನವಾದಿ ಮಹಿಳಾ ಸಂಘದ ಸುರೇಖಾ ರಜಪೂತ, ಜಿಲ್ಲಾಧ್ಯಕ್ಷ ಬಿಸ್ಮಿಲ್ಲಾಬಡೇಘರ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ