ಆ್ಯಪ್ನಗರ

ಸಾಲ ಬಾಧೆ ತಾಳದ ಸಾವಿಗೆ ಶರಣಾದ ಅನ್ನದಾತ

ಸಾಲ ಬಾಧೆಗೆ ಮತ್ತೋರ್ವ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ‌ ನಡೆದಿದೆ.

Vijaya Karnataka Web 29 Jul 2019, 2:07 pm
ವಿಜಯಪುರ: ಸಾಲ ಬಾಧೆ ತಾಳದ‌ ರೈತರೊಬ್ಬರ ನೇಣಿಗೆ ಶರಣಾದ ಘಟನೆ ದೇವರಹಿಪ್ಪರಗಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ‌ ಸೋಮವಾರ ನಡೆದಿದೆ.
Vijaya Karnataka Web suicide


ಗ್ರಾಮದ ಲೇಸಪ್ಪ ಡಾಂಗಿ(65) ಆತ್ಮಹತ್ಯೆ ಮಾಡಿಕೊಂಡ ರೈತ.

ಆತ್ಮಹತ್ಯೆಗೀಡಾದ ಲೇಸಪ್ಪ‌ ಪಕ್ಕದ ಕೋರವಾರ ಗ್ರಾಮದ ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಒಂದೂವರೆ ಲಕ್ಷ ರೂಪಾಯಿ ಸಾಲ ಮಾಡಿದ್ದ. ಅಲ್ಲದೇ 3ಲಕ್ಷ ಖಾಸಗಿ ಕೈಗಡ ಸಾಲ‌ ಮಾಡಿಕೊಂಡಿದ್ದ.

ಆದರೆ ಸಕಾಲಕ್ಕೆ ಮಳೆಯಾಗದ್ದರಿಂದ‌ ಮಾಡಿದ ಸಾಲ ತೀರಿಸುವುದು ಹೇಗೆ ‌ಎಂದು‌ ಜೀವನದಲ್ಲಿ ಜಿಗುಪ್ಸೆ ಹೊಂದಿ‌ ಸೋಮವಾರ ನೇಣಿಗೆ ಶರಣಾಗಿದ್ದಾನೆ.

ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ