ಆ್ಯಪ್ನಗರ

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ವಿಜಯಪುರದಲ್ಲಿ ವಿಚಾರಣೆ

ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂದಗಿಯ ಪರಶುರಾಮ ವಾಗ್ಮೋರೆ ಬಂಧಿಸಿರುವ ಎಸ್‌ಐಟಿ ಬುಧವಾರ ಮತ್ತೆ ಜಿಲ್ಲೆಗೆ ಆಗಮಿಸಿ ಕಾರ್ಯಾಚರಣೆ ಮುಂದುವರಿಸಿದೆ.

Vijaya Karnataka 14 Jun 2018, 5:00 am
ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂದಗಿಯ ಪರಶುರಾಮ ವಾಗ್ಮೋರೆ ಬಂಧಿಸಿರುವ ಎಸ್‌ಐಟಿ ಬುಧವಾರ ಮತ್ತೆ ಜಿಲ್ಲೆಗೆ ಆಗಮಿಸಿ ಕಾರ್ಯಾಚರಣೆ ಮುಂದುವರಿಸಿದೆ.
Vijaya Karnataka Web gauri murder case investigation in vijayapura
ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ವಿಜಯಪುರದಲ್ಲಿ ವಿಚಾರಣೆ


ಬಂಧಿತ ಪರಶುರಾಮ ವಾಗ್ಮೋರೆ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರ ಹೆಸರು ಬಾಯಿ ಬಿಟ್ಟ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಗೆ ಆಗಮಿಸಿದ ಎಸ್‌ಐಟಿ ಸಿಂದಗಿ ಯುವಕ ಸೇರಿದಂತೆ ನಾಲ್ವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದೆ. ಆದರೆ ಈ ಬಗ್ಗೆ ಸ್ಥಳೀಯ ಪೊಲೀಸರಿಗೂ ಮಾಹಿತಿ ಇಲ್ಲ.

ಏತನ್ಮಧ್ಯೆ ಎಸ್‌ಐಟಿ ತಂಡ ಜಿಲ್ಲೆಗೆ ಬಂದ ಬಗ್ಗೆ ಅಧಿಕೃತ ಮಾಹಿತಿ ನಮಗೂ ಇಲ್ಲ. ಅವರು ತಮ್ಮ ಪಾಡಿಗೆ ಬಂದು ವಿಚಾರಣೆ ನಡೆಸುತ್ತಾರೆ. ಆದರೆ, ಗೌರಿಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂದಗಿ ಮತ್ತೊಬ್ಬ ಯುವಕ ಸೇರಿದಂತೆ ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರ ನಡೆಸಿದ್ದಾರೆ ಎಂದು ಪೊಲೀಸ್‌ ಇಲಾಖೆ ಮೂಲಗಳಿಂದ ತಿಳಿದುಬಂದಿದೆ. ಎಸ್‌ಐಟಿ ತಂಡದ ವಿಚಾರಣೆ ಸಿಂದಗಿ ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ಪಾಕಿಸ್ತಾನ ಧ್ವಜ ಹಾರಾಟದ ಪ್ರಕರಣದಲ್ಲಿದ್ದವರನ್ನೇ ಸುತ್ತುವರಿದಿದೆ ಎಂಬ ಮಾಹಿತಿ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ