ಆ್ಯಪ್ನಗರ

ಹತ್ಯಾಚಾರ ಆರೋಪಿ ಸೆರೆ: ಅತ್ಯಾಚಾರ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಮುಕ

ವಿಜಯಪುರ : ಬಸವನಬಾಗೇವಾಡಿ ತಾಲೂಕಿನ ಚಿಮ್ಮಲಗಿ ತಾಂಡಾದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Vijaya Karnataka 9 Oct 2018, 7:55 am
ವಿಜಯಪುರ : ಬಸವನಬಾಗೇವಾಡಿ ತಾಲೂಕಿನ ಚಿಮ್ಮಲಗಿ ತಾಂಡಾದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Vijaya Karnataka Web rape


ಚಿಮ್ಮಲಗಿ ತಾಂಡಾದ ಶಿವಾನಂದ ಚಂದು ಲಮಾಣಿ (35) ಬಂಧಿತ ಆರೋಪಿ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಬಗ್ಗೆ ವಿವರ ನೀಡಿ, ಚಿಮ್ಮಲಗಿ ತಾಂಡಾದಲ್ಲಿ ಸೆ.30ರಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯವೆಸಗಿ, ಕೊಲೆ ಮಾಡಿದ ಬಗ್ಗೆ ನಿಡಗುಂದಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಮ್ಮ ಸಿಬ್ಬಂದಿ ಈ ಪ್ರಕರಣದ ಬಗ್ಗೆ ತನಿಖೆ ಕೈಗೊಂಡು ಜಾಡು ಹಿಡಿದ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು.

ಚಿಮ್ಮಲಗಿ ತಾಂಡಾದಲ್ಲಿ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಆಧುನಿಕ ತಂತ್ರಜ್ಞಾನಗಳು ಇಲ್ಲದ ಕಾರಣ ತನಿಖೆ ಸುಲಭವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆರೋಪಿ

ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆಸಿದ ಆರೋಪಿಯನ್ನು ಬಂಧಿಸಲು 50 ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳ ತಂಡ ರಚಿಸಲಾಗಿತ್ತು. ವಿಶೇಷವೆಂದರೆ ಬಂಧಿತ ಆರೋಪಿ ಕೂಡ ಬಾಲಕಿ ಹತ್ಯಾಚಾರ ಖಂಡಿಸಿ ನಡೆದ ಪ್ರತಿಭಟನೆಯಲ್ಲೂ ಪಾಲ್ಗೊಂಡು ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದ ಎಂದು ಪ್ರಕಾಶ ನಿಕ್ಕಂ ತಿಳಿಸಿದರು.

ಜಾಗದ ಸಮಸ್ಯೆ ಕಾರಣ

ಬಾಲಕಿಯ ತಂದೆ ಹಾಗೂ ಬಂಧಿತ ಆರೋಪಿ ನಡುವೆ ಸಣ್ಣ ಜಾಗದ ಬಗ್ಗೆ ವೈಮನಸ್ಸಿತ್ತು. ಈ ಕಾರಣಕ್ಕಾಗಿಯೇ ದುಷ್ಕೃತ್ಯ ಎಸಗಿದ್ದಾಗಿದ್ದಾನೆ. ವಿಶೇಷ ಸಾಮರ್ಥ್ಯ‌ದ ಬಾಲಕಿಯಾಗಿದ್ದು, ಆಕೆಯನ್ನು ತಂದೆಯ ಬಳಿಗೆ ಕರೆದುಕೊಂಡು ಹೋಗುವುದಾಗಿ ಹೇಳಿ ದೌರ್ಜನ್ಯ ಎಸಗಿದ್ದಾಗಿ ಆರೋಪಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆಂದು ಎಸ್ಪಿ ತಿಳಿಸಿದರು.

ಸಿಬ್ಬಂದಿ ಕಾರ್ಯಕ್ಕೆ ಶ್ಲಾಘನೆ

ಪ್ರಕರಣ ಬೇಧಿಸುವಲ್ಲಿ ಬಸವನಬಾಗೇವಾಡಿ ಡಿಎಸ್‌ಪಿ ಮಹೇಶ್ವರ ಗೌಡ ನೇತೃತ್ವದಲ್ಲಿ ಬಸವನಬಾಗೇವಾಡಿ ಸಿಪಿಐ ಎಂ.ಎನ್‌.ಶಿರಹಟ್ಟಿ, ಪಿಎಸ್‌ಐ ಬಿ.ಬಿ.ಬಿಸನಕೊಪ್ಪ, ಮನಗೂಳಿ ಪಿಎಸ್‌ಐ ಸಿ.ಬಿ.ಬಾಗೇವಾಡಿ, ಪಿಎಸ್‌ಐ ವಸಂತ ಬಂಡಗಾರ, ಗುರುಶಾಂತ ದಾಶ್ಯಾಳ ಅವರನ್ನೊಳಗೊಂಡ ತಂಡ ಯಶಸ್ವಿಯಾಗಿದೆ. ತಂಡದ ಕಾರ್ಯ ಶ್ಲಾಘನೀಯ ಎಂದು ತಿಳಿಸಿದ ಪ್ರಕಾಶ ನಿಕ್ಕ, ಬಹುಮಾನ ಘೋಷಿಸಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ