ವಿಜಯಪುರ: ಇಲ್ಲಿನ ಮಂಜುನಾಥ ನಗರದ ಮಲ್ಲಿಕಾರ್ಜುನ ಶಾಲೆ ಬಳಿ ಗಾಂಜಾ ನಶೆಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಿರುವುದನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳು ಸೇರಿದಂತೆ ಎಲ್ಲೆಡೆ ಖಂಡನೆ ವ್ಯಕ್ತವಾಗಿದ್ದು, ಪ್ರತಿಭಟನೆ ನಡೆದಿದೆ.
ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿರುವುದಾಗಿ ಎಸ್ಪಿ ತಿಳಿಸಿದ್ದಾರೆ. ಕುಟುಂಬದವರು ಬಾಲಕಿಯ ಶವವಿಟ್ಟು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಬೆಳಗ್ಗೆ ಕೈ ಬಿಟ್ಟಿದ್ದಾರೆ.
ವಿಷಯ ತಿಳಿದು ರೊಚ್ಚಿಗೆದ್ದ ಬಾಲೆಯ ಪೋಷಕರು ಹಾಗೂ ಸಂಬಂಧಿಕರು, ಲೈಂಗಿಕ ದೌರ್ಜನ್ಯ ಎಸಗಿದ ದುರುಳರಿಗೆ ಸಾರ್ವಜನಿಕರೊಂದಿಗೆ ಸೇರಿ ಗೂಸಾ ನೀಡಿದ್ದಾರೆ. ಬಳಿಕ ಬಾಲೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
ಪ್ರತಿಭಟನೆ:
ಮಂಜುನಾಥ ನಗರದ ಮಲ್ಲಿಕಾರ್ಜುನ ಶಾಲೆ ಬಳಿ ಬಾಲೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ಹಾಗೂ ಸಂಬಂಧಿಗಳು ನಗರದ ಅಂಬೇಡ್ಕರ್ ವೃತ್ತದಲ್ಲಿ ರಾತ್ರಿ 11.45ರ ಸುಮಾರಿಗೆ ಶವದೊಂದಿಗೆ ಪ್ರತಿಭಟನೆ ನಡೆಸಿದರು.
ನೂರಾರು ಪ್ರತಿಭಟನಾಕಾರರು ಶವ ಪರೀಕ್ಷೆಯ ನಂತರ ನೇರವಾಗಿ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಪ್ರತಿಮೆ ಎದುರು ಶವ ಇಟ್ಟು ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆಕಾರರ ಆಕ್ರಂದನ ಮುಗಿಲು ಮುಟ್ಟಿತ್ತು. ಶವದ ಮುಂದೆ ಮಹಿಳೆಯರು ಎದೆ ಬಡಿದುಕೊಂಡು ಕಣ್ಣೀರು ಹಾಕಿದರು. ಅಲ್ಲದೇ ರಸ್ತೆಯ ಮಧ್ಯೆ ಟಯರ್ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ದಲಿತ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದವು. ಮುಂಜಾಗ್ರತೆ ಕ್ರಮವಾಗಿ ಪೊಲೀಸರು ಬಂದೋ ಬಸ್ತ್ ಕೈಗೊಂಡಿದ್ದರು.
ಪ್ರಕರಣ ದಾಖಲು
ಗಾಂಜಾ ನಶೆಯಲ್ಲಿ ಬಾಲೆ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಇಲ್ಲಿನ ಆದರ್ಶ ನಗರ ಠಾಣೆಯಲ್ಲಿ ದಾಖಲಾಗಿದೆ.
ಇನ್ನೊಂದೆಡೆ ವಿಷಯ ತಿಳಿದು ರೊಚ್ಚಿಗೆದ್ದ ಬಾಲೆ ಪೋಷಕರು ಹಾಗೂ ಸಂಬಂಧಿಕರು ಲೈಂಗಿಕ ದೌರ್ಜನ್ಯ ಎಸಗಿದವರಿಗೆ ಸಾರ್ವಜನಿಕರೊಂದಿಗೆ ಸೇರಿ ಗೂಸಾ ನೀಡಿದ್ದಾರೆ. ಬಳಿಕ ಬಾಲೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು. ಆದರೆ ಘಟನೆ ಮಧ್ಯಾಹ್ನ ಬೆಳಕಿಗೆ ಬಂದಿದ್ದರೂ ರಾತ್ರಿ 9 ಗಂಟೆಯಾದರೂ ದೂರು ದಾಖಲಾಗಿರಲಿಲ್ಲ. ಕೊನೆಗೆ ಪ್ರತಿಭಟನೆ ತೀವ್ರತೆಯಿಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಆದರೆ ಪೊಲೀಸರು ಹೇಳುವುದೇ ಬೇರೆ. '' ಬಾಲೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದು ನಿಜ. ಆದರೆ ಸಾಮೂಹಿಕ ದೌರ್ಜನ್ಯ ನಡೆದಿಲ್ಲ. ಒಬ್ಬನೇ ಈ ಕೃತ್ಯ ಎಸಗಿದ್ದಾನೆ'' ಎಂದು ಎಸ್ಪಿ ಕುಲದೀಪ ಜೈನ್ ತಿಳಿಸಿದ್ದಾರೆ.