ಆ್ಯಪ್ನಗರ

ಸರಕಾರ ಸರಿಯಾಗಿ ನಡೆಯಲು ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಳ್ಳುತ್ತಾರೆ: ಖಾದರ್‌

ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿಕೂಟದ ಸಮ್ಮಿಶ್ರ ಸರಕಾರ ಸರಿಯಾಗಿ ನಡೆಯಲು ವರಿಷ್ಠರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಖಾದರ್ ತಿಳಿಸಿದರು.

Vijaya Karnataka Web 3 Jul 2019, 4:23 pm
ವಿಜಯಪುರ: ಸರಕಾರ ಐದು ವರ್ಷ ಆಡಳಿತ ನಡೆಸುತ್ತದೆ. ಸರಕಾರದ ಉಳಿವಿಗಾಗಿ ಸಚಿವರ ರಾಜೀನಾಮೆ ಪಡೆಯುವುದು ಸೇರಿದಂತೆ ಹೈಕಮಾಂಡ್ ನೀಡುವ ಸೂಚನೆಗಳನ್ನು ಪಾಲಿಸಲು ಎಲ್ಲರೂ ಬದ್ಧರಿದ್ದೇವೆ. ಮೈತ್ರಿ ಸರಕಾರ ಅಸ್ಥಿರವಾಗಿಲ್ಲಾ ಎಂದು ನಗರಾಭಿವೃದ್ದಿ ಸಚಿವ ಯು. ಟಿ. ಖಾದರ್ ಹೇಳಿದರು.
Vijaya Karnataka Web ಯುಟಿ ಖಾದರ್‌
ಯುಟಿ ಖಾದರ್


ವಿಜಯಪುರ ತಾಲೂಕಿನ ಬರಟಗಿಯಲ್ಲಿ ಪೌರ ಕಾರ್ಮಿಕರಿಗೆ ವಸತಿ ಯೋಜನೆಯಡಿ ನಿರ್ಮಾಣಗೊಂಡ ವಸತಿ ಸಮುಚ್ಛಯ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಕ್ಷದ ವರಿಷ್ಠರು ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ಬದ್ಧ. ಪಕ್ಷಕ್ಕೆ ತ್ಯಾಗ ಮಾಡಲು ಸಿದ್ಧ ಎಂದು ಸಚಿವರು ತಿಳಿಸಿದರು.

ಬಿಜೆಪಿಯವರು ಹಿಂಬಾಗಿಲಿನಿಂದ ಆಪರೇಷನ್ ನಡೆಸುತ್ತಿದ್ದಾರೆ. ಬಿಜೆಪಿಯವರು ಈ ಹಿಂದೆ ನಡೆಸಿದ ಆಪರೇಷನ್ ಸಂಗತಿ ನಿಮಗೆಲ್ಲಾ ಗೊತ್ತು. ರಮೇಶ ಜಾರಕಿಹೊಳಿ, ಆನಂದ ಸಿಂಗ್ ಕಾಂಗ್ರೆಸ್ ತತ್ವ ಸಿದ್ದಾಂತ ಒಪ್ಪಿರುವವರು. ಮೈತ್ರಿ ಸರಕಾರ ಉತ್ತಮ‌ ಕೆಲಸ ಮಾಡುತ್ತಿದೆ. ಇದನ್ನು ಸಹಿಸದೇ ಬಿಜೆಪಿಯವರು ಅಡೆತಡೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಿರ್ದೇಶನದಂತೆ ನಡೆಯುತ್ತೇವೆ ಎಂದು ಸಚವಿ ಖಾದರ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ