ವಿಜಯಪುರ : ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೊಬ್ಬರು ನಾಮಪತ್ರ ಕಡತ ಹರಿದು ಹಾಕಿದ್ದರಿಂದ ಚುನಾವಣೆ ಮುಂದೂಡಿದ ಪ್ರಕರಣ ತಾಳಿಕೋಟೆ ತಾಲೂಕಿನ ತುಂಬಗಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದಿದೆ.
ಅಧ್ಯಕ್ಷ ಹುದ್ದೆ ಆಕಾಂಕ್ಷಿಯಾಗಿದ್ದ ಶರಣ ಬಸವರಾಜ ಬಸಣ್ಣ ಕೊಳ್ಳಿ ಎಂಬವರು ತಾನು ಸೇರಿದಂತೆ ಮೂವರು ಸಲ್ಲಿಸಿದ್ದ ನಾಮಪತ್ರದ ಕಡತವನ್ನು ಚುನಾವಣಾಧಿಕಾರಿಯಿಂದ ಕಿತ್ತುಕೊಂಡು ಹರಿದು ಹಾಕಿದ್ದಾರೆ. ಈ ಬಗ್ಗೆ ಅಭ್ಯರ್ಥಿ ಮೇಲೆ ಪ್ರಕರಣ ಸ್ಥಳೀಯ ಠಾಣೆಯಲ್ಲಿ ದಾಖಲಾಗಿದ್ದು ನಾಮಪತ್ರ ಹರಿದ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಚುನಾವಾಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ತಿಳಿಸಿದ್ದಾರೆ.
ಅಧ್ಯಕ್ಷ ಹುದ್ದೆ ಆಕಾಂಕ್ಷಿಯಾಗಿದ್ದ ಶರಣ ಬಸವರಾಜ ಬಸಣ್ಣ ಕೊಳ್ಳಿ ಎಂಬವರು ತಾನು ಸೇರಿದಂತೆ ಮೂವರು ಸಲ್ಲಿಸಿದ್ದ ನಾಮಪತ್ರದ ಕಡತವನ್ನು ಚುನಾವಣಾಧಿಕಾರಿಯಿಂದ ಕಿತ್ತುಕೊಂಡು ಹರಿದು ಹಾಕಿದ್ದಾರೆ. ಈ ಬಗ್ಗೆ ಅಭ್ಯರ್ಥಿ ಮೇಲೆ ಪ್ರಕರಣ ಸ್ಥಳೀಯ ಠಾಣೆಯಲ್ಲಿ ದಾಖಲಾಗಿದ್ದು ನಾಮಪತ್ರ ಹರಿದ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಚುನಾವಾಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ತಿಳಿಸಿದ್ದಾರೆ.