ಆ್ಯಪ್ನಗರ

ವಿಜಯಪುರ: ದೀಪಾವಳಿ ದಿನವೇ ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು

ಭೀಮಾ ತೀರ - ಕರ್ನಾಟಕದಲ್ಲಿ ಅತಿ ಹೆಚ್ಚು ಬಾರಿ ಗುಂಡಿನ ಸದ್ದು ಕೇಳಿರುವ ಪ್ರದೇಶ. ಈಗ ದೀಪಾವಳಿ ಸಂದರ್ಭದಲ್ಲಿ ಮತ್ತೆ ಭೀಮಾ ತೀರದಲ್ಲಿ ಗುಂಡಿನ ಸದ್ದು ಮೊಳಗಿದೆ.

Vijaya Karnataka Web 29 Oct 2019, 3:33 pm
ವಿಜಯಪುರ: ಪ್ರತಿಯೊಬ್ಬರೂ ದೀಪಾವಳಿ ಸಂಭ್ರಮದಲ್ಲಿದ್ದಾಗ ಮತ್ತೆ ಭೀಮಾ ತೀರದಲ್ಲಿ ಗುಂಡಿನ ಮೊರೆತಗೊಂಡಿದೆ.
Vijaya Karnataka Web ಗುಂಡಿನ ಸದ್ದು
ಗುಂಡಿನ ಸದ್ದು


ಭೀಮಾತೀರದ ಚಡಚಣ ಸಹೋದರರ ಹತ್ಯೆಯಲ್ಲಿ ಆರೋಪಿಯಾಗಿದ್ದ ಶಿವಾನಂದ ಎಂಬಾತನೇ ಗಾಳಿಯಲ್ಲಿ‌ ಗುಂಡು ಹಾರಿಸಿ ಆತಂಕ‌ ಸೃಷ್ಟಿಸಿದವ.

ದೀಪಾವಳಿ ಸಂದರ್ಭದಲ್ಲಿ ವಾಹನಗಳ ‌ಪೂಜೆಯ ನಂತರ ಆರೋಪಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.

ಇದನ್ನು ಮೊಬೈಲ್‌ನಲ್ಲಿ ರಿಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್‌ ಕೂಡ ಮಾಡಲಾಗಿದೆ. ಇದೀಗ ಅದು ವೈರಲ್ ಆಗಿದೆ.

ಚಡಚಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಧರ್ಮರಾಜ ಚಡಚಣನ ಹತ್ಯೆಯಲ್ಲಿ ಶಿವಾನಂದ ಆರೋಪಿಯಾಗಿದ್ದು ಇಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ