ಆ್ಯಪ್ನಗರ

ಎಚ್ಡಿಕೆ ಸರಕಾರ ಸರ್ಕಸ್‌ ಕಂಪನಿ

ವಿಜಯಪುರ : ರಾಜ್ಯದಲ್ಲಿ ಸರಕಾರ ಇನ್ನೂ ಟೇಕಾಫ್‌ ಆಗಿಲ್ಲ. 13 ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದ್ದರೂ ಮಂತ್ರಿಗಳು ನಿದ್ರೆಯಿಂದೆ ಎದ್ದಿಲ್ಲ. ಕುಮಾರಸ್ವಾಮಿ ಸರಕಾರ ಸರ್ಕಸ್‌ ಕಂಪನಿಯಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಎನ್‌.ರವಿಕುಮಾರ್‌ ವಾಗ್ದಾಳಿ ನಡೆಸಿದರು.

Vijaya Karnataka 31 Aug 2018, 5:00 am
ವಿಜಯಪುರ : ರಾಜ್ಯದಲ್ಲಿ ಸರಕಾರ ಇನ್ನೂ ಟೇಕಾಫ್‌ ಆಗಿಲ್ಲ. 13 ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದ್ದರೂ ಮಂತ್ರಿಗಳು ನಿದ್ರೆಯಿಂದೆ ಎದ್ದಿಲ್ಲ. ಕುಮಾರಸ್ವಾಮಿ ಸರಕಾರ ಸರ್ಕಸ್‌ ಕಂಪನಿಯಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಎನ್‌.ರವಿಕುಮಾರ್‌ ವಾಗ್ದಾಳಿ ನಡೆಸಿದರು.
Vijaya Karnataka Web hdk government circus company
ಎಚ್ಡಿಕೆ ಸರಕಾರ ಸರ್ಕಸ್‌ ಕಂಪನಿ


ವಿಜಯಪುರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಅಧ್ಯಕ್ಷ ವಿಶ್ವನಾಥ, ಸಿಎಂ ಕುಮಾರಸ್ವಾಮಿ ನಡುವೆ ಕಚ್ಚಾಟ ನಡೆದಿದೆ. ಇವೆಲ್ಲ ಬೆಳವಣಿಗೆ ಗಮನಿಸಿದರೆ ಕುಮಾರಸ್ವಾಮಿ ಸರಕಾರ ಸರ್ಕಸ್‌ ಕಂಪನಿ ಇದ್ದಂತಿದೆ. ರೈತರ ಸಾಲಮನ್ನಾ ವಿಷಯದಲ್ಲಿ ಸಾಕಷ್ಟು ಗೊಂದಲವಿದೆ. ಕುಮಾರಸ್ವಾಮಿ ಕರ್ನಾಟಕ ರಾಜ್ಯದ ಸಿಎಂ ಎಲ್ಲ. ಗೊಂದಲಾಪುರದ ಸಿಎಂ ಆಗಿದ್ದಾರೆಂದು ವ್ಯಂಗ್ಯವಾಡಿದರು.

ಬಿಎಸ್‌ವೈ ಪ್ರಚಾರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೆ.1 ಹಾಗೂ 2ರಂದು ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯಲ್ಲಿ ಪರಿಷತ್‌ ಚುನಾವಣೆ ಪ್ರಚಾರ ಕೈಗೊಳ್ಳುವರು ಎಂದು ಎನ್‌.ರವಿಕುಮಾರ್‌ ತಿಳಿಸಿದ್ದಾರೆ.

ಸೆ.1ರಂದು ಸಿಂದಗಿ, ವಿಜಯಪುರ ಹಾಗೂ ಬಸವನಬಾಗೇವಾಡಿ ಹಾಗೂ ಸೆ.2ರಂದು ಜಮಖಂಡಿ ಹಾಗೂ ಬಾಗಲಕೋಟದಲ್ಲಿ ಪ್ರಚಾರ ನಡೆಸುವರು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ