ಆ್ಯಪ್ನಗರ

ಆತ್ಮಹತ್ಯೆಗೆ ಯತ್ನಿಸಿದ ಪತ್ನಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ದೂರು ನೀಡಿದ ಗಂಡ!

ಪತ್ನಿಯ ವರ್ತನೆಗೆ ಹೆದರಿದ ಗಂಡನ ಮನೆಯವರು ಆಕೆಯ ಆತ್ಮಹತ್ಯೆ ತಪ್ಪಿಸಬೇಕೆಂಬ ಉದ್ದೇಶದಿಂದ ಕಂಬಕ್ಕೆ ಕಟ್ಟಿ ಹಾಕಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾವು ಸ್ಥಳಕ್ಕೆ ಧಾವಿಸಿ, ಆಕೆಯನ್ನು ರಕ್ಷಿಸಿದ್ದೇವೆ. ಈ ಕುರಿತು ದೂರು, ಪ್ರತಿ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೊರ್ತಿ ಠಾಣೆ ಪೊಲೀಸರು ತಿಳಿಸಿದ್ದಾರೆ.

Vijaya Karnataka 4 Aug 2021, 8:08 am
ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಪತಿ, ಪತ್ನಿಯ ನಡುವೆ ಜಗಳವಾಗಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ ಪತ್ನಿಯನ್ನು ಪತಿ ಕಂಬಕ್ಕೆ ಕಟ್ಟಿ ಹಾಕಿ, ಬಳಿಕ ಪೊಲೀಸರಿಗೆ ದೂರು ನೀಡಿದ ಘಟನೆ ಇಂಡಿ ತಾಲೂಕಿನ ಲಿಂಗದಳ್ಳಿ ತಾಂಡೆ ನಂ.1ರಲ್ಲಿ ನಡೆದಿದೆ.
Vijaya Karnataka Web police


ತಾಂಡೆಯ ಅನಿತಾ ಸಂತೋಷ ಜಾಧವ (19) ಎಂಬುವರೇ ದಿಗ್ಬಂಧನಕ್ಕೊಳಗಾದ ಮಹಿಳೆ. ಆದರೆ ಅನಿತಾಳ ವರಸೆಯೇ ಬೇರೆ. ವರದಕ್ಷಿಣೆ ದುರಾಸೆಗಾಗಿ ನನ್ನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ವಾಸ್ತವದಲ್ಲಿ ಹಾಗಾಗಿಲ್ಲ. ಕ್ಷುಲ್ಲಕ ಕಾರಣಕ್ಕೆ ಗಂಡನೊಂದಿಗೆ ಜಗಳವಾಗಿದೆ. ಇದರಿಂದ ಸಿಟ್ಟಾದ ಅನೀತಾ ನೇಣು ಹಾಕಿಕೊಳ್ಳಲು ಹಾಗೂ ಮಾಳಿಗೆಯಿಂದ ನೆಗೆದು ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಬೆದರಿಕೆ ಹಾಕಿದ್ದಾಳೆ.
ಫೇಸ್‌ಬುಕ್‌ನಲ್ಲಿ ಕಡಿಮೆ ಬೆಲೆಗೆ ಐಫೋನ್‌ ಜಾಹೀರಾತು; ನಂಬಿದ ವ್ಯಕ್ತಿಗೆ ₹7.29 ಲಕ್ಷ ಪಂಗನಾಮ!
ಇದಕ್ಕೆ ಹೆದರಿದ ಗಂಡನ ಮನೆಯವರು ಆಕೆಯ ಆತ್ಮಹತ್ಯೆ ತಪ್ಪಿಸಬೇಕೆಂಬ ಉದ್ದೇಶದಿಂದ ಕಂಬಕ್ಕೆ ಕಟ್ಟಿ ಹಾಕಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾವು ಸ್ಥಳಕ್ಕೆ ಧಾವಿಸಿ, ಆಕೆಯನ್ನು ರಕ್ಷಿಸಿದ್ದೇವೆ. ಈ ಕುರಿತು ದೂರು, ಪ್ರತಿ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೊರ್ತಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ