ಆ್ಯಪ್ನಗರ

ಭೂಸ್ವಾಧೀನ ಕಾಯ್ದೆ: ತಿದ್ದುಪಡಿ ಬಿಲ್‌ಗೆ ಅಂಕಿತ ಬೇಡ

ವಿಜಯಪುರ: ರಾಜ್ಯ ಸರಕಾರ ಜಾರಿಗೊಳಿಸಲು ಮುಂದಾಗಿರುವ 2013ರ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ಬಿಲ್‌ನ್ನು ರಾಜ್ಯಪಾಲನ್ನು ಅಂಗೀಕರಿಸಬಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

Vijaya Karnataka 3 Mar 2019, 5:00 am
ವಿಜಯಪುರ: ರಾಜ್ಯ ಸರಕಾರ ಜಾರಿಗೊಳಿಸಲು ಮುಂದಾಗಿರುವ 2013ರ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ಬಿಲ್‌ನ್ನು ರಾಜ್ಯಪಾಲನ್ನು ಅಂಗೀಕರಿಸಬಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.
Vijaya Karnataka Web land acquisition act do not approach the amendment bill
ಭೂಸ್ವಾಧೀನ ಕಾಯ್ದೆ: ತಿದ್ದುಪಡಿ ಬಿಲ್‌ಗೆ ಅಂಕಿತ ಬೇಡ


ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭೂಸ್ವಾದೀನ ಕಾಯ್ದೆ ತಿದ್ದುಪಡಿ ಬಿಲ್‌ ರೈತರಿಗೆ ಮಾರಕವಾಗಿದೆ. ಸರಕಾರ ಸದನದಲ್ಲಿ ಚರ್ಚಿಸದೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ. ಅಲ್ಲದೆ, ಬಿಜೆಪಿಯವರು ಕೂಡ ವಿರೋಧಿಸಿಲ್ಲ ಎಂದು ಆರೋಪಿಸಿದರು.

ಕಾಯ್ದೆಯಲ್ಲಿ ಈ ಮೊದಲು ಭೂಸ್ವಾಧೀನಕ್ಕೆ ಶೇ.80 ರಷ್ಟು ರೈತರ ಒಪ್ಪಿಗೆ ಪಡೆಯಬೇಕಿತ್ತು, ಕೈಗಾರಿಕಾ ಪ್ರದೇಶಾಭಿವೃದ್ಧಿ , ನಗರೀಕರಣ, ರಸ್ತೆಗೆ ಸೇರಿದಂತೆ 6 ಅಂಶಗಳಿಗೆ ಮಾತ್ರ ಭೂಸ್ವಾಧೀನಕ್ಕೆ ಅವಕಾಶ ಇತ್ತು. ಆದರೀಗ ಉದ್ದೇಶಿತ ತಿದ್ದುಪಡಿ ಬಿಲ್‌ನಲ್ಲಿ 6 ಅಂಶಗಳನ್ನು ಸೇರಿಸಿಲ್ಲ. ಕೇವಲ ಉದ್ಯಮಿಗಳು, ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿದೆ ಎಂದು ಆರೋಪಿಸಿದರು.

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಬಿಲ್‌ಗೆ ರಾಜ್ಯಪಾಲರು ಅಂಕಿತ ಹಾಕಬಾರದು ಎಂದು ಒತ್ತಾಯಿಸಲಾಗುವುದು. ಬಿಲ್‌ ವಾಪಸ್‌ ಪಡೆಯಬೇಕೆಂದು ಸರಕಾರಕ್ಕೂ ಒತ್ತಡ ಹಾಕಲಾಗುವುದು. ಈಗಾಗಲೇ ವಿವಿಧಡೆ ಬಿಲ್‌ನ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಗಿದೆ.

ಅದಾಗ್ಯೂ ಅಂಗೀಕಾರಗೊಂಡರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದರು.

ಮೈತ್ರಿ ಸರಕಾರ ರೆಸಾರ್ಟ್‌ ರಾಜಕಾರಣದಲ್ಲಿ ತಲ್ಲೀನವಾಗಿದೆ. 104 ಸ್ಥಾನ ಪಡೆದ ಬಿಜೆಪಿ ಸರಕಾರ ಉರುಳಿಸಲು ಮುಂದಾಗಿದೆ. ರಾಜ್ಯದಲ್ಲಿ ಭೀಕರ ಇದ್ದರೂ ಪರಿಹಾರ ಕಾರ್ಯಕ್ಕೆ ಮುಂದಾಗಿಲ್ಲ ಎಂದು ಬಡಗಲಪುರ ನಾಗೇಂದ್ರ ಆರೋಪಿಸಿದರು.

ಅಖಿಲ ಭಾರತ ಕೃಷಿ ಸಮನ್ವಯ ಸಮಿತಿ ಸಭೆಯಲ್ಲಿ ಬೆಲೆ ನಿಗದಿ ಬಗ್ಗೆ ಗಂಭೀರ ಚರ್ಚೆ ಆಗಿದೆ. ಕನಿಷ್ಠ ಬೆಲೆ ನೀಡದವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹಾಕಬೇಕು. ಆಹಾರ ಭದ್ರತೆಗಿಂತ ಆಹಾರ ಸಾರ್ವಭೌಮತ್ವ ಬೇಕೆಂಬ ಬೇಡಿಕೆ ಕೇಳಿ ಬಂದಿದೆ. ಇವೆಲ್ಲ ವಿಷಯ ಚುನಾವಣೆ ಅಜೆಂಡಾ ಆಗಬೇಕೆಂದರು. ಬದುಕು ಕಟ್ಟಿಕೊಡುವುದೇ ರಾಜಕೀಯ ಪಕ್ಷಗಳ ಆದ್ಯತೆ ಆಗಬೇಕು. ದೇವರು, ಧರ್ಮ ಆದ್ಯತೆ ಆಗಬಾರದು ಎಂದು ತಿಳಿಸಿದರು.

ರೈತರ ಸಾಲಮನ್ನಾ ಘೋಷಣೆ ಆಗಿದ್ದರೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ ಎಂದು ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಆರೋಪಿಸಿದರು.

ಕೃಷಿ ಸಮ್ಮಾನ ಅಲ್ಲ ಅವಮಾನ :


ಕೇಂದ್ರ ಸರಕಾರ ರೈತರಿಗೆ 6 ಸಾವಿರ ರೂ. ನೀಡುವುದಾಗಿ ಬಜೆಟ್‌ನಲ್ಲಿ ಕೃಷಿ ಸಮ್ಮಾನ ಯೋಜನೆ ಘೋಷಣೆ ಮಾಡಿದೆ. ಇದು ಕೃಷಿ ಅವಮಾನ ಯೋಜನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ತಾವೇ ಘೋಷಣೆ ಮಾಡಿದ ಕನಿಷ್ಠ ಬೆಂಬಲ ಬೆಲೆ ಯೋಜನೆಯನ್ನು ಕಾನೂನು ವ್ಯಾಪ್ತಿಗೊಳಪಡಿಸಬೇಕೆಂದು ಒತ್ತಾಯಿಸಿದರು.
ಸಂಘಟನೆ ಪ್ರಮುಖರಾದ ಕೆ.ಟಿ.ಗಂಗಾಧರ, ನುಲೇನೂರ ಶಂಕರಪ್ಪ ಇದ್ದರು.

ಲೋಕಸಭೆ ಚುನಾವಣೆಯಲ್ಲಿ ಮಂದಿರ-ಮಸೀದಿ, ಮೋದಿ-ರಾಹುಲ್‌ಗಾಂಧಿ ಎಂಬ ವಿಷಯಗಳು ರಾಜಕೀಯ ಪಕ್ಷಗಳ ಅಜೆಂಡಾ ಆಗಬಾರದು.
ಚಾಮರಸ ಮಾಲಿಪಾಟೀಲ, ರೈತ ಸಂಘದ ಗೌರವಾಧ್ಯಕ್ಷ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ