ಆ್ಯಪ್ನಗರ

ವಿಜಯಪುರದಲ್ಲಿ ಮೈ ಮೇಲೆ ಲಾರಿ ಹರಿದು ವ್ಯಕ್ತಿ ಸಾವು

ಹೆಬ್ಬಾಳ ಗ್ರಾಮದ ಮಹಾದೇವ ಮಾದರ್ (35) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಈತ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಏಕಾಏಕಿ ಡಿಕ್ಕಿ ಹೊಡೆದಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Agencies 10 Jul 2020, 12:29 pm
ವಿಜಯಪುರ: ಪಾದಚಾರಿ ಮೇಲೆ ಲಾರಿ ಹರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿ ನಡೆದಿದೆ.
Vijaya Karnataka Web Road Accident


ಹೆಬ್ಬಾಳ ಗ್ರಾಮದ ಮಹಾದೇವ ಮಾದರ್ (35) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಈತ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಏಕಾಏಕಿ ಡಿಕ್ಕಿ ಹೊಡೆದಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ವಿಜಯಪುರದಲ್ಲಿ ನಕಲಿ ರಸಗೊಬ್ಬರ ದಂಧೆ: ಮಟ್ಟಹಾಕಲು ಅಖಾಡಕ್ಕಿಳಿದ ಜಿ.ಪಂ. ಅಧ್ಯಕ್ಷೆ

ಮಹಾದೇವ ಮಾದಾರ್ ಮೇಲೆ ಲಾರಿ ಹರಿದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ರಸ್ತೆ ಮೇಲೆ ಮೃತದೇಹ ನಜ್ಜುಗುಜ್ಜಾಗಿ ಬಿದ್ದಿದೆ. ಮಹಾದೇವ ರಸ್ತೆ ಮೇಲೆ ಬಿದ್ದು ಸಾವನ್ನಪ್ಪಿದ ಬಳಿಕವೂ ಆತನ ಮೃತದೇಹದ ಮೇಲೆ ಬೇರೆ ವಾಹನಗಳು ಹಾಯ್ದಿರುವ ಶಂಕೆ ವ್ಯಕ್ತವಾಗಿದೆ.

ವಿಜಯಪುರ: ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು, ವಿದ್ಯುತ್ ಉತ್ಪಾದನೆ ಆರಂಭ

ಘಟನೆ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ನಿಲ್ಲದ ಚಿರತೆ ಹಾವಳಿ..! ಬಬಲೇಶ್ವರದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಬಳಿಕವೂ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ