ಆ್ಯಪ್ನಗರ

ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸಿ

ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಯಾವ ಯಾ ಕ್ರಮ ಕೈಗೊಂಡಿದ್ದೀರಿ? ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ರೈತರ ಪಾಡೇನು? ಕೂಡಲೇ ರೈತರ ಬೆಳೆ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಿ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka Web 22 Apr 2020, 5:00 am
ಇಂಡಿ: ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಯಾವ ಯಾ ಕ್ರಮ ಕೈಗೊಂಡಿದ್ದೀರಿ? ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ರೈತರ ಪಾಡೇನು? ಕೂಡಲೇ ರೈತರ ಬೆಳೆ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಿ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web 15IND1 MLA_38


ಪಟ್ಟಣದಲ್ಲಿಅಧಿಕಾರಿಗಳ ಸಭೆ ನಡೆಸಿದ ಅವರು, ತೋಟಗಾರಿಕೆ ಬೆಳೆಗಳಾದ ಕಲ್ಲಂಗಡಿ, ಕರಬೂಜ್‌, ನಿಂಬೆ, ದಾಳಿಂಬೆ ಹಗೂ ಹೂ ಮಾರಾಟವಾಗುತ್ತಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಗಳು ಬಂದ್‌ ಆಗಿವೆ. ಪಕ್ಕದ ರಾಜ್ಯಕ್ಕೂ ಮಾರಾಟ ಮಾಡಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಹಾಫ್ಸ್‌ಕಾಮ್‌ ಮೂಲಕ ಖರೀದಿಗೆ ಅವಕಾಶ ಕಲ್ಪಿಸಿದ್ದಾರೆ ಆದರೆ ಅಲ್ಲೂಕೂಡ ಎಲ್ಲರೈತರ ಬೆಳೆ ಖರೀದಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದ್ದು, ಸರಕಾರವೇ ನೇರವಾಗಿ ರೈತರಿಂದ ಬೆಳೆ ಖರೀದಿ ಮಾಡುವಂತಾಗಬೇಕು. ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ಚರ್ಚಿಸಿ ಎಂದರು.

ಫೆಬ್ರುವರಿ ತಿಂಗಳವರೆಗೆ ಖರೀದಿಸಿ ತೊಗರಿ ಬಿಲ್‌ ರೈತರ ಖಾತೆಗೆ ಜಮೆ ಆಗಿದೆ ಎಂದು ಕೃಷಿ ಇಲಾಖೆ ಅಧಿಕಾರಿ ತಿಳಿಸಿದರು. ಬಹುತೇಕ ಸಕ್ಕರೆ ಕಾರ್ಖಾನೆಗಳು ನವೆಂಬರ್‌ ತಿಂಗಳವರೆಗೆ ಪೂರೈಕೆಯಾದ ಕಬ್ಬಿನ ಬಿಲ್‌ ಪಾವತಿಸಿವೆ. ಭೀಮಾಶಂಕರ ಕಾರ್ಖಾನೆ ಡಿ.15ರ ವರೆಗಿನ ಬಿಲ್‌ ಪಾವತಿಸಿದೆ. ಸಕ್ಕರೆ ಮಾರಾಟವಾಗದೇ ಇರುವುದರಿಂದ ಕಾರ್ಖಾನೆಗಳ ಮಾಲೀಕರಿಗೆ ತೊಂದರೆಯಾಗಿದೆ ಎಂದು ಶಾಸಕರು ತಿಳಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ