ಆ್ಯಪ್ನಗರ

ನೊಣವಿನಕೆರೆ ಸ್ವಾಮೀಜಿ ಹೇಳಿಕೆ ಅಪ್ರಸ್ತುತ, ಈಗ ಸಿಎಂ ಕುರ್ಚಿ ಖಾಲಿಯಿಲ್ಲ: ಎಂಬಿ ಪಾಟೀಲ್

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂಬ ಮೊಣವಿನ ಕೆರೆ ಡಾ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ ಅವರ ಭವಿಷ್ಯವನ್ನು ಸಚಿವ ಎಂಬಿ ಪಾಟೀಲ್ ಅವರು ಅಲ್ಲಗೆಳೆದಿದ್ದಾರೆ. ಈಗ ಸಿಎಂ ಖುರ್ಚಿ ಖಾಲಿ ಇಲ್ಲದ್ದರಿಂದ ಈ ಮಾತು ಅಪ್ರಸ್ತುತ ಎಂದು ತಿಳಿಸಿದ್ದಾರೆ. ಸಿಎಂ ಆಗುವುದು ಪಕ್ಷದ ವರಿಷ್ಠರ ಕೈಯ್ಯಲ್ಲಿರುತ್ತದೆ. ಅದಕ್ಕೆಂದೇ ಹೈಕಮಾಂಡ್ ಇದೆ. ಅವರು ವೀಕ್ಷಕರ ಮೂಲಕ ಶಾಸಕರ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈಗ ಈ ಪ್ರಶ್ನೆ ಉದ್ಭವಿಸದು ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

Edited byಗಣೇಶ್ ಪ್ರಸಾದ್ ಕುಂಬ್ಳೆ | Vijaya Karnataka Web 9 Dec 2023, 1:41 pm

ಹೈಲೈಟ್ಸ್‌:

  • ಡಿಕೆ ಶಿವಕುಮಾರ್ ಸಿಎಂ ಆಗ್ತಾರೆಂದ ನೊಣವಿನಕೆರೆ ಶ್ರೀಗಳ ಭವಿಷ್ಯ ಅಲ್ಲಗೆಳೆದ ಎಂಬಿ ಪಾಟೀಲ್
  • ಯಾರನ್ನು ಸಿಎಂ ಮಾಡಬೇಕೆಂದು ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನಿಸುತ್ತದೆ
  • ಈಗ ಸಿಎಂ ಹುದ್ದೆ ಖಾಲಿ ಇಲ್ಲದ್ದರಿಂದ ಶ್ರೀಗಳ ಭವಿಷ್ಯ ಅಪ್ರಸ್ತುತ ಎಂದ ಕೈಗಾರಿಕಾ ಸಚಿವ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web mbp- nonavinakere sri
ಎಂಬಿ ಪಾಟೀಲ್ಜ-ನೊಣವಿನಕೆರೆ ಶ್ರೀ(ಸಂಗ್ರಹ ಚಿತ್ರ)
ವಿಜಯಪುರ: ಡಿಕೆ ಶಿವಕುಮಾರ ಅವರು ಸಿಎಂ ಆಗಬೇಕೆಂದು ನೊಣವಿನಕೆರೆ ಸ್ವಾಮೀಜಿ ಹೇಳಿಕೆ ಅಪ್ರಸ್ತುತ. ಈಗಂತೂ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗುವುದು ನಮ್ಮ ಪಕ್ಷದ ವರಿಷ್ಠರ ಕೈಯ್ಯಲ್ಲಿರುತ್ತದೆ. ಇದಕ್ಕೆಂದೇ ಕಾಂಗ್ರೆಸ್ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇದ್ದಾರೆ. ಅವರೆಲ್ಲ ವೀಕ್ಷಣೆ ಮಾಡಿ ಶಾಸಕರ ಅಭಿಪ್ರಾಯ ಪಡೆದು ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ. ಹೀಗಾಗಿ ಈ ಪ್ರಶ್ನೆ ಈಗ ಸದ್ಯಕ್ಕೆ ಉದ್ಭವಿಸುವುದಿಲ್ಲ. ಮೇಲಾಗಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದರು.

ಡಿಕೆ ಶಿವಕುಮಾರ್ ಸಿಎಂ ಆಗೇ ಆಗ್ತಾರೆ: ನೊಣವಿನಕೆರೆ ಡಾ ಕರಿವೃಷಭ ದೇಶೀಕೇಂದ್ರ ಸ್ವಾಮೀಜಿ ಭವಿಷ್ಯ!
ಅಸಮಾಧಾನ ಹೊರಗೆ ಚರ್ಚೆ ಮಾಡೊಲ್ಲ
ಹಿರಿಯ ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ಅವರು ಸಿಎಂ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಂಬಿ ಪಾಟೀಲ, ಏನೇ ಅಸಮಾಧಾನ ಇದ್ದರೂ, ನಮ್ಮ ಪಕ್ಷದ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಹರಿಪ್ರಸಾದ್ ನಮ್ಮ ಪಕ್ಷದ ಹಿರಿಯ ನಾಯಕರು. ಅವರು ಯಾವ ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ ಅವರೊಬ್ಬ ಹಿರಿಯ ಹಾಗೂ ಕಟ್ಟರ್ ಕಾಂಗ್ರೆಸ್ ಮುಖಂಡರು. ಅವರ ಬದ್ಧತೆಯನ್ನು ನಾವ್ಯಾರೂ ಪ್ರಶ್ನೆ ಮಾಡಲ್ಲ. ಪ್ರಶ್ನೆ ಮಾಡಲೂ ಸಹ ಅಗಲ್ಲ ಎಂದರು.
ಅನೇಕ ಸಂದರ್ಭಗಳಲ್ಲಿ ಅವರು ಸೂಚನೆಗಳನ್ನು ಕೊಟ್ಟಿರುತ್ತಾರೆ. ಎಲ್ಲ ಸಮುದಾಯಗಳಿಗೂ ಅನುದಾನ ಕೊಡಿ ಎಂದು ಹೇಳಿರುತ್ತಾರೆ. ಅವರು ಓರ್ವ ಹಿಂದುಳಿದ ವರ್ಗದ ನಾಯಕರು. ಎಲ್ಲರ ನೋವುಗಳನ್ನ ಅರ್ಥ ಮಾಡಿಕೊಂಡವರು. ಹಾಗಾಗಿ ಎಲ್ಲರಿಗೂ ಅನುದಾನ ಕೊಡಿ ಎಂದು ಹೇಳಿರಬಹುದು. ಅದರಲ್ಲೇನು ತಪ್ಪು ಎಂದು ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದರು.

ನೊಣವಿನಕೆರೆ ಅಜ್ಜಯ್ಯನ ಅಪ್ಪಣೆ ಇಲ್ಲದೆ ಮುನ್ನಡೆಯೊಲ್ಲ ಡಿಕೆ ಶಿವಕುಮಾರ್!
ತನ್ವೀರ್ ವಿರುದ್ಧ ಎನ್‌ಐಎ ತನಿಖೆಯಾಗಲಿ
ಮೌಲ್ವಿ ತನ್ವೀರ ಪೀರಾ ಅವರು ಐಸಿಎಸ್ ಉಗ್ರರೊಂದಿಗೆ ನಂಟು ಹೊಂದಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಕೇಂದ್ರ ಸರಕಾರ ಅವರ ವಿರುದ್ಧ ಎನ್‌ಐಎ ತನಿಖೆ ನಡೆಸಲಿ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಒತ್ತಾಯಿಸಿದರು.

ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಈಗಾಗಲೇ ತನ್ವೀರಾ ಪೀರಾ ಹೇಳಿದ್ದಾರೆ. ಹಾಗಾಗಿ ಕೇಂದ್ರ ಸರಕಾರ ಎನ್‌ಐಎ ತನಿಖೆ ನಡೆಸಿದರೆ ಸತ್ಯಾಸತ್ಯತೆ ಹೊರಗಡೆ ಬರುತ್ತದೆ. ಆದರೆ ತನಿಖೆಯಲ್ಲಿ ಸುಳ್ಳು ಎಂಥಾದರೆ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಏನು ಮಾಡುತ್ತಾರೆ ಎನ್ನುವುದು ನಮ್ಮ ಪ್ರಶ್ನೆ ಎಂದು ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು.

ಯತ್ನಾಳ ಅವರು ಮುಸ್ಲಿಮರನ್ನು ದ್ವೇಷಿಸುತ್ತಲೇ ಬಂದಿದ್ದಾರೆ. ಆದರೆ ಜೆಡಿಎಸ್‌ನಲ್ಲಿದ್ದಾಗ ಮುಸ್ಲಿಮರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಅಂದು ಮುಸ್ಲಿಮರ ಮತಗಳು ಅವರಿಗೆ ಬೇಕಾಗಿದ್ದವು. ಆಮೇಲೆ ಬಿಜೆಪಿಗೆ ಮರಳಿದ ಮೇಲೆ ಹಿಂದೂತ್ವ, ಹಿಂದೂ ಹುಲಿ ಎಂದು ಬಿರುದು ಇಟ್ಟುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಲೇಖಕರ ಬಗ್ಗೆ
ಗಣೇಶ್ ಪ್ರಸಾದ್ ಕುಂಬ್ಳೆ
ವಿಜಯ ಕರ್ನಾಟಕದಲ್ಲಿ ಡಿಜಿಟಲ್ ಪತ್ರಕರ್ತ. ಪತ್ರಿಕೋದ್ಯಮದಲ್ಲಿ 15 ವರ್ಷಗಳ ಅನುಭವ. ಓದುವಿಕೆ, ಬರೆಯುವಿಕೆ, ಯಕ್ಷಗಾನದಲ್ಲಿ ಆಸಕ್ತಿ. ಸಮಯ ಸಿಕ್ಕಾಗ ಚೆಸ್, ಕ್ರಿಕೆಟ್, ಶಟಲ್ ಆಡುವುದು, ಪ್ರವಾಸ, ಚಾರಣ ಮಾಡುವುದು ನೆಚ್ಚಿನ ಹವ್ಯಾಸಗಳು. ಶಿವರಾಮ ಕಾರಂತ ಮತ್ತು ಪೂರ್ಣಚಂದ್ರ ತೇಜಸ್ವಿಯವರ ಬರಹಳೆಂದರೆ ಅಚ್ಚಮೆಚ್ಚು. ರಾಜಕೀಯ, ಕ್ರೀಡೆ, ಮಾನವೀಯ ಸಂವೇದಿ ಲೇಖನಗಳು, ವ್ಯಕ್ತಿಚಿತ್ರ, ನುಡಿಚಿತ್ರ, ಲಲಿತ ಪ್ರಬಂಧಗಳನ್ನು ಬರೆಯುವುದರಲ್ಲಿ ಆಸಕ್ತಿ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ