ಆ್ಯಪ್ನಗರ

'ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಆಕಾಂಕ್ಷಿ, ಸಿದ್ದರಾಮಯ್ಯನವರೇ ನನ್ನ ಹೆಸರು ಶಿಫಾರಸ್ಸು ಮಾಡಿದ್ದಾರೆ': ಎಂಬಿ ಪಾಟೀಲ್

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಲಾಬಿ ನಡೆಸಿಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಏನು ಮಾಡಬೇಕು ಎಂಬುದನ್ನು ಸೋನಿಯಾ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಗಮನಕ್ಕೆ ತಂದಿದ್ದೇನೆ ಅಷ್ಟೇ ಎಂದು ಎಂ. ಬಿ. ಪಾಟೀಲ್ ಹೇಳಿದ್ದಾರೆ.

Vijaya Karnataka Web 26 Jan 2020, 3:55 pm
ವಿಜಯಪುರ: ಉತ್ತರ ಕರ್ನಾಟಕಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುವ ಸಾಮರ್ಥ್ಯ‌ ನನಗೂ ಇದೆ ಎಂದಿದ್ದಾರೆ.
Vijaya Karnataka Web siddu and mb patil
'ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಆಕಾಂಕ್ಷಿ, ಸಿದ್ದರಾಮಯ್ಯನವರೇ ನನ್ನ ಹೆಸರು ಶಿಫಾರಸ್ಸು ಮಾಡಿದ್ದಾರೆ': ಎಂಬಿ ಪಾಟೀಲ್


ಇಲ್ಲಿನ ಡಾ. ಬಿ.ಆರ್‌. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗಣರಾಜ್ಯೋತ್ಸವ ಧ್ವಜಾರೋಹಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಆಕಾಂಕ್ಷಿ ನಾನಲ್ಲ. ಆ ಸ್ಥಾನಕ್ಕೆ ಸಿದ್ಧರಾಮಯ್ಯನವರೇ ಸೂಕ್ತ ಎಂಬುದು ನಾನೂ ಸೇರಿದಂತೆ ಹಲವು ನಾಯಕರ ಅಭಿಪ್ರಾಯವಾಗಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕ ಈಗ ಹೈಕಮಾಂಡ್‌ ಅಂಗಳದಲ್ಲಿದೆ. ದಕ್ಷಿಣ ಕರ್ನಾಟಕದವರು ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿದ್ದಾರೆ. ಹಾಗಾಗಿ ಉತ್ತರ ಕರ್ನಾಟಕದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದೂ ಎಂ.ಬಿ. ಪಾಟೀಲ ಒತ್ತಾಯಿಸಿದರು.

ಡಿಕೆಶಿಗೆ ಸಿಗ್ತಿಲ್ಲ, ಖರ್ಗೆಗೆ ಬೇಕಿಲ್ಲ, ಸಿದ್ದು ಬಿಡ್ತಿಲ್ಲ..! ದಿಲ್ಲಿ ಎಲೆಕ್ಷನ್‌ವರೆಗೂ ನಾಯಕತ್ವ ಗೊಂದಲ ಬಗೆಹರಿಯಲ್ಲ..?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಲಾಬಿ ನಡೆಸಿಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಏನು ಮಾಡಬೇಕು ಎಂಬುದನ್ನು ಸೋನಿಯಾ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಗಮನಕ್ಕೆ ತಂದಿದ್ದೇನೆ ಅಷ್ಟೇ ಎಂದರು.

ಪ್ರತಿಪಕ್ಷ, ಸಿಎಲ್‌ಪಿ ಸ್ಥಾನ ಪ್ರತ್ಯೇಕಿಸೋ ಬೇಡಿಕೆ; ಸಿದ್ದು ನಿವಾಸದಲ್ಲಿ ಆಪ್ತರ ಸಭೆ

ಕಾರ್ಯಾಧ್ಯಕ್ಷರ ಸಂಖ್ಯೆ ಹೆಚ್ಚಿಸಬೇಕೆಂಬುದು ಸಿದ್ದರಾಮಯ್ಯ ಅವರ ನಿಲುವಲ್ಲ. ಇದೆಲ್ಲ ಮಾಧ್ಯಮಗಳ ಊಹಾಪೋಹ ಎಂದು ಸ್ಪಷ್ಟನೆ ನೀಡಿದ ಎಂ.ಬಿ. ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂಬುದು ಎಲ್ಲರ ಆಸೆಯಾಗಿದೆ ಎಂದರು. ಯಾವ ಜಾತಿಯವರಿಗೆ ನೀಡಬೇಕೆಂಬುದನ್ನು ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಹೇಳಿದ ಪಾಟೀಲ್, ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್‌ ಪ್ರಯತ್ನಿಸುವುದಿಲ್ಲ. ತಾನಾಗಿಯೇ ಉರುಳಿದರೆ ಯಾರು ಏನು ಮಾಡಲು ಸಾಧ್ಯವಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಗ್ಗಂಟು; ಹೋಮ ಹವನದ ಮೊರೆ ಹೋದ ಡಿಕೆಶಿ !

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ