ಆ್ಯಪ್ನಗರ

ಸ್ವಾತಂತ್ರೋತ್ಸವದ ಭಾಷಣದಲ್ಲಿ ಅಂಬೇಡ್ಕರ್‌ ಸ್ಮರಿಸದ ಸಚಿವೆ ಜೊಲ್ಲೆ, ದಲಿತ ಮುಖಂಡರಿಂದ ತರಾಟೆ!

ಸಚಿವೆ ಭಾಷಣ ಮುಗಿಸಿ ಸ್ಥಳಕ್ಕೆ ಬಂದು ಕುಳಿತುಕೊಳ್ಳುತ್ತಿದ್ದಂತೆಯೇ ತೀವ್ರ ತರಾಟೆಗೆ ತೆಗೆದುಕೊಂಡರು. ಇದರಿಂದ ಕ್ಷಮೆ ಕೋರಿ ಮದ ಸಚಿವೆ ಜೊಲ್ಲೆ‌ ಮತ್ತೆ ವೇದಿಕೆಯನ್ನೇರಿ, ಡಾ. ಅಂಬೇಡ್ಕರ್ ಹೆಸರು ಸ್ಮರಿಸದೇ‌ ಇರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಪ್ರತಿ ಭಾಷಣದಲ್ಲಿ ಡಾ. ಅಂಬೇಡ್ಕರ್ ಅವರನ್ನು ಸ್ಮರಿಸುವ ನಾನು ಈ ಬಾರಿ ಮಾತ್ರ ಅಚಾನಕ್ ಆಗಿ ಸ್ಮರಿಸಲಿಲ್ಲ ಎಂದು ತಿಳಿಸಿದ್ದಾರೆ.

Vijaya Karnataka Web 15 Aug 2020, 12:31 pm
ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಹೆಸರು‌ ಸ್ಮರಿಸದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ದಲಿತ ಮುಖಂಡ ಅಡಿವೆಪ್ಪ ಸಾಲಗಲ್ ತರಾಟೆಗೆ ತೆಗೆದುಕೊಂಡ ಘಟನೆ ನಗರದಲ್ಲಿ ಶನಿವಾರ ನಡೆಯಿತು. ಅಕ್ಕನ ವಿವಿಯಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಚಿವೆ ನೀಡಿದ ಸಂದೇಶದಲ್ಲಿ ಡಾ. ಅಂಬೇಡ್ಕರ್ ಅವರನ್ನು ಸ್ಮರಿಸಲಿಲ್ಲ.
Vijaya Karnataka Web aVoaM7EY


ಇದರಿಂದಾಗಿ ಕುಪಿತಗೊಂಡ ಅಡಿವೆಪ್ಪ ಸಾಲಗಲ್. ಸಚಿವೆ ಭಾಷಣ ಮುಗಿಸಿ ಸ್ಥಳಕ್ಕೆ ಬಂದು ಕುಳಿತುಕೊಳ್ಳುತ್ತಿದ್ದಂತೆಯೇ ತೀವ್ರ ತರಾಟೆಗೆ ತೆಗೆದುಕೊಂಡರು. ಇದರಿಂದ ಕ್ಷಮೆ ಕೋರಿ ಮದ ಸಚಿವೆ ಜೊಲ್ಲೆ‌ ಮತ್ತೆ ವೇದಿಕೆಯನ್ನೇರಿ, ಡಾ. ಅಂಬೇಡ್ಕರ್ ಹೆಸರು ಸ್ಮರಿಸದೇ‌ ಇರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಪ್ರತಿ ಭಾಷಣದಲ್ಲಿ ಡಾ. ಅಂಬೇಡ್ಕರ್ ಅವರನ್ನು ಸ್ಮರಿಸುವ ನಾನು ಈ ಬಾರಿ ಮಾತ್ರ ಅಚಾನಕ್ ಆಗಿ ಸ್ಮರಿಸಲಿಲ್ಲ.

ನನ್ನಿಂದ‌ ತಪ್ಪಾಗಿದೆ. ನನಗೆ ರಾಜಕೀಯದಲ್ಲಿ ಈ ಸ್ಥಾನಮಾನ ಸಿಗಲಿಕ್ಕೆ ಡಾ. ಅಂಬೇಡ್ಕರ್ ಅವರೇ ಕಾರಣರು. ನನ್ನ ಅಚಾತುರ್ಯದಿಂದ ಅವರ ಹೆಸರನ್ನು ಬಳಸದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸುತ್ತೇನೆ. ಇದನ್ನು ಪ್ರಶ್ನಿಸಿದ ಸಹೋದರರು ಈ ವಿಷಯವನ್ನು ಇಲ್ಲಿಗೆ‌ ಮುಗಿಸಬೇಕು. ತನ್ನ ಸ್ವಂತ ತಂಗಿಯನ್ನು ಮನ್ನಿಸಬೇಕೆಂದು ಸಾರ್ವಜನಿಕವಾಗಿ ತಿಳಿಸಿದಾಗ, ವಿವಾದ ತಣ್ಣಗಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ