ಆ್ಯಪ್ನಗರ

ಹೋಳಿ ಹಬ್ಬದಂದೆ ವಿಜಯಪುರದಲ್ಲಿ ರಕ್ತದೋಕುಳಿ

ಹಳೆ ವೈಷಮ್ಯದ ಹಿನ್ನೆಲೆ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟಿ ಪಟ್ಟಣದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಫಯಾಜ್ ಲೋಣಿ ಎಂಬಾತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

Vijaya Karnataka Web 21 Mar 2019, 3:05 pm
ವಿಜಯಪುರ: ಹೋಳಿ ಹಬ್ಬದಂದು ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ರಕ್ತದೋಕುಳಿ ಹರಿದಿದೆ.
Vijaya Karnataka Web murder


ಹೌದು, ಹಳೆ ವೈಷಮ್ಯದ ಹಿನ್ನೆಲೆ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟಿ ಪಟ್ಟಣದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಫಯಾಜ್ ಲೋಣಿ ಎಂಬಾತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಬಾಗಲಕೋಟೆ ಮೂಲದ ಫಯಾಜ್ ನಿನ್ನೆ ಸಂಬಂಧಿಕರ ಮನೆಗೆ ಬಂದಿದ್ದ, ಈ ವೇಳೆ ಕಿರಾಣಿ ಬಜಾರ್ ವೃತ್ತದಲ್ಲಿ ಫಯಾಜನನ್ನು ಹತ್ಯಗೈಯಲಾಗಿದೆ.

ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಕೊಲೆಗಡುಕರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ