ಆ್ಯಪ್ನಗರ

ಶವ ಪರೀಕ್ಷೆ ವರದಿ ಬಂದಿಲ್ಲ: ಎಸ್ಪಿ

ವಿಜಯಪುರ ಕಾಂಗ್ರೆಸ್‌ ಮುಖಂಡೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿಲ್ಲ . ಹೀಗಿದ್ದಾಗ ಯಾರು ಏನು ಮಾತಾಡಿದರೂ ಅರ್ಥವಿಲ್ಲ ಎಂದು ಎಸ್ಪಿ ಪ್ರಕಾಶ ನಿಕ್ಕಂ ತಿಳಿಸಿದರು.

Vijaya Karnataka 22 May 2019, 5:00 am
ವಿಜಯಪುರ : ಕಾಂಗ್ರೆಸ್‌ ಮುಖಂಡೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿಲ್ಲ . ಹೀಗಿದ್ದಾಗ ಯಾರು ಏನು ಮಾತಾಡಿದರೂ ಅರ್ಥವಿಲ್ಲ ಎಂದು ಎಸ್ಪಿ ಪ್ರಕಾಶ ನಿಕ್ಕಂ ತಿಳಿಸಿದರು.
Vijaya Karnataka Web no coronavirus report reported sp
ಶವ ಪರೀಕ್ಷೆ ವರದಿ ಬಂದಿಲ್ಲ: ಎಸ್ಪಿ


ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬರಲು ಇನ್ನೂ 15 ದಿನ ಬೇಕು. ತನಿಖೆ ಚುರುಕುಗೊಳಿಸಲಾಗಿದ್ದು, ಅದಕ್ಕಾಗಿ 3 ತಂಡಗಳನ್ನು ರಚಿಸಲಾಗಿದೆ ಎಂದರು.

ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿಲ್ಲ, ಹೀಗಿದ್ದಾಗ ರೇಷ್ಮಾ ಅವರ ಆಪ್ತ ಸಮೀವುಲ್ಲಾ ಪ್ರಕರಣದ ಬಗ್ಗೆ ಹೇಗೆ ಮಾತನಾಡುತ್ತಾರೆಂದು ಪ್ರಶ್ನಿಸಿದ ಪ್ರಕಾಶ ನಿಕ್ಕಂ, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ