ಆ್ಯಪ್ನಗರ

ಗಾಂಜಾ ವಶ, ಒಬ್ಬನ ಬಂಧನ

ವಿಜಯಪುರ : ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 64 ಸಾವಿರ ರೂ. ಮೌಲ್ಯದ ಗಾಂಜಾ ಪತ್ತೆ ಮಾಡಿರುವ ಬಬಲೇಶ್ವರ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

Vijaya Karnataka 10 Sep 2018, 5:00 am
ವಿಜಯಪುರ : ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 64 ಸಾವಿರ ರೂ. ಮೌಲ್ಯದ ಗಾಂಜಾ ಪತ್ತೆ ಮಾಡಿರುವ ಬಬಲೇಶ್ವರ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
Vijaya Karnataka Web ones detention
ಗಾಂಜಾ ವಶ, ಒಬ್ಬನ ಬಂಧನ


ಗ್ರಾಮದ ಚಂದ್ರಪ್ಪ ಬನ್ನೆಪ್ಪ ಭವಾನಿ ಬಂಧಿತ. ಈತ ತನ್ನ ಜಮೀನಿನಲ್ಲಿ ಅನಧಿಕೃತವಾಗಿ ಗಾಂಜಾ ಬೆಳೆದು ಹೆಚ್ಚಿನ ಬೆಲೆಗೆ ಮಾರಾಟಕ್ಕೆ ಕೊಂಡೊಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ಬಂಧಿತನಿಂದ 54 ಸಾವಿರ ರೂ. ಮೌಲ್ಯದ ಹಸಿ ಗಾಂಜಾ ಹಾಗೂ 10 ಸಾವಿರ ರೂ. ಮೌಲ್ಯದ ಗಾಂಜಾ ಗಿಡದ ತೊಪ್ಪಲು, ಹೂವು, ಬೀಜಗಳನ್ನು ವಶಪಡಿಸಿಕೊಂಡಿದ್ದಾರೆ. ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸವಾರ ಸಾವು :

ಬೈಕ್‌ಗೆ ಬಸ್‌ ಡಿಕ್ಕಿ ಹೊಡದು ಸವಾರ ಮೃತಪಟ್ಟ ಘಟನೆ ಕನಮಡಿ ಬಳಿ ಸಂಭವಿಸಿದೆ.

ಗ್ರಾಮದ ಅಣ್ಣಪ್ಪ/ಅಣ್ಣಾಸಾಬ ಬಿರಾದಾರ ಮೃತಪಟ್ಟವ. ಆರೋಪಿ ಬಸ್‌ ಚಾಲಕ ಪರಾರಿಯಾಗಿದ್ದಾನೆ. ತಿಕೋಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ಕಾಣೆ :

ಡೊಳ್ಳಿನ ಹಾಡುಗಾರಿಕೆ ಕೇಳಿ ಬರುವುದಾಗಿ ಮನೆಯಲ್ಲಿ ಹೇಳಿದ್ದ ಯುವಕನೊಬ್ಬ ಇಂಡಿ ತಾಲೂಕಿನ ತಾಂಬಾ ಗ್ರಾಮದ ತೋಟದ ಮನೆಯಿಂದ ಕಾಣೆಯಾಗಿದ್ದಾನೆ.

ಗ್ರಾಮದ ಶಿವಪ್ಪ ಹಣಮಂತ ಮಸಳಿ (19) ಕಾಣೆಯಾದವ. ಸೆ. 3 ರಂದು ಮಧ್ಯಾಹ್ನ 12 ಕ್ಕೆ ಹೋದವ ಮನೆಗೆ ಮರಳಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರುವ ಇಂಡಿ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ