ಆ್ಯಪ್ನಗರ

ವಿಜಯಪುರ: ಪೊಲೀಸರ ಬಲೆಗೆ ಖತರ್ನಾಕ್‌ ಕಳ್ಳ..! 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ವಿಜಯಪುರ ಪೊಲೀಸರು ಖತರ್ನಾಕ್‌ ಕಳ್ಳನನ್ನು ಬಂಧಿಸಿದ್ದು, ಮನೆಗೆ ಕನ್ನ ಹಾಕಿ ಚಿನ್ನಾಭರಣ ದೋಚಿದ್ದ ಕಳ್ಳನನ್ನು ಬಂಧಿಸಿರುವ ಪೊಲೀಸರು, 6 ಲಕ್ಷ ರೂ. ಮೊತ್ತದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

Vijaya Karnataka Web 20 Jan 2021, 9:47 pm
ವಿಜಯಪುರ: ಮನೆಗೆ ಕನ್ನ ಹಾಕಿ ಚಿನ್ನಾಭರಣ ದೋಚಿದ್ದ ಕಳ್ಳನನ್ನು ಬಂಧಿಸಿರುವ ಪೊಲೀಸರು, 6 ಲಕ್ಷ ರೂ. ಮೊತ್ತದ ಚಿನ್ನಾಭರಣ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Vijaya Karnataka Web Vijayapura
ವಿಜಯಪುರದಲ್ಲಿ ಕಳ್ಳನನ್ನು ಬಂಧಿಸಿರುವ ಪೊಲೀಸರು


ವಿಜಯಪುರ ತಾಲೂಕಿನ ಡೊಮನಾಳ ತಾಂಡಾ ನಂ.2 ನಿವಾಸಿ ಕಿರಣ ವಾಚು ರಾಠೋಡ (26) ಬಂಧಿತ ಕಳ್ಳ. ಈತ ತಮ್ಮ ತಾಂಡಾದ ಅನಿಲ ರಾಠೋಡ ಎಂಬುವರ ಮನೆ ಬೀಗ ಮುರಿದು, 53 ಗ್ರಾಂ ತೂಕದ ಮಾಂಗಲ್ಯ, 30 ಗ್ರಾಂ ತೂಕದ ಚೈನ್, 9 ಗ್ರಾಂ ತೂಕದ 1 ಜೊತೆ ಕಿವಿಯೋಲೆ ಹಾಗೂ 25 ಉಂಗುರು ಸೇರಿ 6 ಲಕ್ಷ ರೂ. ಬೆಲೆ ಬಾಳುವ 13 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡಿದ್ದ ವಿಶೇಷ ತಂಡ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿದಾಗ, ತಪ್ಪೊಪ್ಪಿಕೊಂಡಿದ್ದಾನೆ ಎಂದು ಎಸ್‌ಪಿ ಅನುಪಮ ಅಗರವಾಲ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ