ಆ್ಯಪ್ನಗರ

ಗಣೇಶ ಮೂರ್ತಿ ಮೆರವಣಿಗೆ ನಡೆಸುತ್ತಿದ್ದ ಭಕ್ತರ ಮೇಲೆ ಪೊಲೀಸರ ದೌರ್ಜನ್ಯ?

ಗಣೇಶ ಮೂರ್ತಿ ಮೆರವಣಿಗೆ ನಡೆಸುತ್ತಿದ್ದ ಭಕ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ. ವಿಜಯಪುರ ನಗರದ ಬಿಎಲ್‌ಡಿಇ ಎಂಜಿನಿಯರಿಂಗ್ ಕಾಲೇಜಿನ ಎದುರಿನ ಆಶ್ರಮ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಲ್ಲದೆ, ಗಣೇಶ ಮೂರ್ತಿಯ ಮೆರವಣಿಗೆಯನ್ನು ಪೊಲೀಸರು ತಡೆದಿದ್ದಾರೆ ಎಂದು ಸಹ ಆರೋಪಿಸಲಾಗಿದೆ.

Vijaya Karnataka Web 14 Sep 2018, 11:00 am
ವಿಜಯಪುರ: ಗಣೇಶ ಮೂರ್ತಿ ಮೆರವಣಿಗೆ ನಡೆಸುತ್ತಿದ್ದ ಭಕ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ. ವಿಜಯಪುರ ನಗರದ ಬಿಎಲ್‌ಡಿಇ ಎಂಜಿನಿಯರಿಂಗ್ ಕಾಲೇಜಿನ ಎದುರಿನ ಆಶ್ರಮ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಲ್ಲದೆ, ಗಣೇಶ ಮೂರ್ತಿಯ ಮೆರವಣಿಗೆಯನ್ನು ಪೊಲೀಸರು ತಡೆದಿದ್ದಾರೆ ಎಂದು ಸಹ ಆರೋಪಿಸಲಾಗಿದೆ.
Vijaya Karnataka Web police lathicharge


ಮೆರವಣಿಗೆ ಮೂಲಕ ಗಣೇಶ ಮೂರ್ತಿ ಪ್ರತಿಷ್ಟಾಪಿಸಲು ತೆರಳುತ್ತಿದ್ದಾಗ ಟ್ರಾಫಿಕ್ ಜಾಮ್ ಆಗಿದೆಯೆಂದು ಆರೋಪಿಸಿದ ಪೊಲೀಸರು ಮೆರವಣಿಗೆಯನ್ನು ತಡೆದಿದ್ದಾರೆ. ಜತೆಗೆ, ಬೇಗ ಮೆರವಣಿಗೆ ಮುಗಿಸಬೇಕು ಎಂದು ಎಪಿಎಂಸಿ ಠಾಣೆ ಪೊಲೀಸರು ಸೂಚಿಸಿದಾಗ ಮೆರವಣಿಗೆಕಾರರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ. ಆಗ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಘಟನೆಯಲ್ಲಿ ಗಣೇಶ ಮೂರ್ತಿ ಇದ್ದ ಟ್ರ್ಯಾಕ್ಟರ್ ಓಡಿಸುತ್ತಿದ್ದ ಚಾಲಕ, ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ನಂತರ ಎಪಿಎಂಸಿ ಪಿಎಸ್ಐ ಪಾಟೀಲ ಮತ್ತು ಸಿಬ್ಬಂದಿ ಟ್ರ್ಯಾಕ್ಟರ್ ಜತೆ ಅಲ್ಲಿಂದ ತೆರಳುವಂತೆ ಮೆರವಣಿಗೆಕಾರರಿಗೆ ಎಚ್ಚರಿಕೆ ನೀಡಿದ್ದಾರೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ