ಆ್ಯಪ್ನಗರ

ಕಳಪೆ ಕಾಮಗಾರಿ, ಶಿಸ್ತು ಕ್ರಮಕ್ಕೆ ಆಗ್ರಹ

ಹೂವಿನಹಿಪ್ಪರಗಿ: ಸ್ಥಳೀಯ ಆಶ್ರಯ ವಸತಿ ಶಾಲೆಯ 1.12 ಕೋಟಿ ರೂ.ಗಳ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದು, ಆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಪ್ರಕಾಶ ಬಿರಾದಾರ ಹಾಗೂ ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ಒತ್ತಾಯಿಸಿದರು.

Vijaya Karnataka 3 Dec 2018, 5:00 am
ಹೂವಿನಹಿಪ್ಪರಗಿ: ಸ್ಥಳೀಯ ಆಶ್ರಯ ವಸತಿ ಶಾಲೆಯ 1.12 ಕೋಟಿ ರೂ.ಗಳ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದು, ಆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಪ್ರಕಾಶ ಬಿರಾದಾರ ಹಾಗೂ ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ಒತ್ತಾಯಿಸಿದರು.
Vijaya Karnataka Web poor work demand for disciplinary action
ಕಳಪೆ ಕಾಮಗಾರಿ, ಶಿಸ್ತು ಕ್ರಮಕ್ಕೆ ಆಗ್ರಹ


ಆಶ್ರಯ ಶಾಲೆಯ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದ ಹಿಂದೆ ಸ್ಥಗಿತಗೊಂಡ ಕಾಮಗಾರಿಯನ್ನು ಜಿಲ್ಲಾಮಟ್ಟದ ಅಧೀಕಾರಿಗಳು ಶನಿವಾರ ವೀಕ್ಷಣೆ ಮಾಡಿದ್ದಾರೆ. ಈ ಶಾಲೆಯಲ್ಲಿ 1ರಿಂದ 5ನೇ ತರಗತಿಯ ಪ.ಜಾ. ಹಾಗೂ ಇನ್ನುಳಿದ ಸಮಾಜದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 2016ರಲ್ಲಿಯೇ ಈ ಕಾಮಗಾರಿಗೆ ಟೆಂಡರ್‌ ಆಗಿದ್ದು, ಇಲ್ಲಿ ಸರಿಯಾದ ಶೌಚಾಲಯ ಕೂಡ ಇಲ್ಲ. ಇದರಿಂದ ವಿದ್ಯಾರ್ಥಿಗಳು ನಿತ್ಯ ಪರದಾಡುವಂತಾಗಿದೆ ಎಂದು ಆರೋಪಿಸಿದರು.

ಅಧಿಕಾರಿಗಳು ಕಾಟಾಚಾರಕ್ಕೆ ಥರ್ಡ್‌ಪಾರ್ಟಿ ಇನ್ಸ್‌ಪೆಕ್ಷನ್‌ ಮಾಡಿದ್ದಾರೆ. ಶಾಲೆಯ ಸುತ್ತಲೂ ನಿರ್ಮಾಣ ಮಾಡಿರುವ ಕಂಪೌಂಡ್‌ ಗೋಡೆ ಕಳಪೆ ಮಟ್ಟದ್ದಾಗಿದೆ. ಎಲ್ಲ ಕಾಮಗಾರಿಗಳ ಸಂಪೂರ್ಣ ತನಿಖೆಯಾಗಬೇಕು. ಕೂಡಲೇ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದು ಮೇಟಿ, ಬಸನಗೌಡ ಪಾಟೀಲ, ಕರವೇ ತಾಲೂಕು ಅಧ್ಯಕ್ಷ ಮಂಜುನಾಥ ಹಾರಿವಾಳ, ಕರವೇ ಮುಖಂಡರಾದ ಉಮೇಶ ಅವಟಿ, ಶ್ರೀಶೈಲ ಹೆಬ್ಬಾಳ, ರಾಜು ಮ್ಯಾಗೇರಿ, ಪ್ರಕಾಶ ರಾಠೋಡ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ