ಆ್ಯಪ್ನಗರ

ಅತ್ಯಾಚಾರವೆಸಗಿ ಬಾಲಕಿಯ ಕೊಲೆ: ನಾನಾ ಕಡೆ ಪ್ರತಿಭಟನೆ

ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಪ್ರಕರಣ ಖಂಡಿಸಿ ಮುದ್ದೇಬಿಹಾಳ ಬಂದ್‌ಗೆ ಕರೆ ನೀಡಲಾಗಿದ್ದು, ನಾನಾ ಕಡೆ ಪ್ರತಿಭಟನೆ ನಡೆಯುತ್ತಿದೆ.

Vijaya Karnataka Web 21 Dec 2017, 12:54 pm
ವಿಜಯಪುರ: ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಪ್ರಕರಣ ಖಂಡಿಸಿ ಮುದ್ದೇಬಿಹಾಳ ಬಂದ್‌ಗೆ ಕರೆ ನೀಡಲಾಗಿದ್ದು, ರಾಜ್ಯದ ನಾನಾ ಕಡೆ ಪ್ರತಿಭಟನೆ ನಡೆಯುತ್ತಿದೆ.
Vijaya Karnataka Web protest against rape and murder in vijayapura
ಅತ್ಯಾಚಾರವೆಸಗಿ ಬಾಲಕಿಯ ಕೊಲೆ: ನಾನಾ ಕಡೆ ಪ್ರತಿಭಟನೆ


ಬಾಲಕಿಯ ಕಳೇಬರದೊಂದಿಗೆ ಡಾ.ಅಂಬೇಡ್ಕರ್‌ ವೃತ್ತದಲ್ಲಿ ಪೋಷಕರು ಮಂಗಳವಾರ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

ಬಾಲೆ ಮೇಲೆ ದೌರ್ಜನ್ಯ ಎಸಗಿ ಆಕೆಯನ್ನು ಕೊಲೆಗೈದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂದು ಒತ್ತಾಯಿಸಿ ನಾನಾ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ರಾಯಚೂರಿನಲ್ಲೂ ಪ್ರತಿಭಟನೆ

ಪ್ರಕರಣದಲ್ಲಿ ಭಾಗಿಯಾದವರ ಬಂಧಿಸಬೇಕು, ದಲಿತರ ಮೇಲೆ ದೌರ್ಜನ್ಯ ತಡೆಯಬೇಕು ಎಂದು ಆಗ್ರಹಿಸಿ ದಲಿತ ಸೇನೆಯಿಂದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ವೃತ್ತದಲ್ಲಿ ಮಾನವ ಸರಪಳಿ ನಿರ್ಮಾಣ ಮಾಡಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದಲ್ಲಿ ಎಬಿವಿಪಿ, ಬಿವಿಎಸ್ ವತಿಯಿಂದ ಪ್ರತ್ಯೇಕ ಪ್ರತಿಭಟನೆ ನಡೆದರೆ, ಮಂಡ್ಯದಲ್ಲಿ ದಲಿತ ಸಂಘರ್ಷ ಸಮಿತಿ ಸೇರಿದಂತೆ ನಾನಾ ಸಂಘಟನೆಗಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ