ಆ್ಯಪ್ನಗರ

ವಿಜಯಪುರ: ಗುಮ್ಮಟ‌ ನಗರಿಯಲ್ಲಿ ಮತ್ತೆ ಗುಂಡಿನ ಸದ್ದು

ವಿಜಯಪುರದಲ್ಲಿ ಇತ್ತೀಚೆಗೆ ಗುಂಡಿನ ದಾಳಿ ಹೆಚ್ಚಾಗುತ್ತಿದೆ. ಇತ್ತೀಚೆಗೆ ಶೂಟೌಟ್‌ ನಡೆದ ಪ್ರಕರಣದ ಬೆನ್ನಲ್ಲೇ ಮತ್ತೆ ಗುಂಡಿನ ಸದ್ದು ಮೊಳಗಿದೆ. ಗುಮ್ಮಟ ನಗರಿಯಲ್ಲಿ ನಡೆದ ಕ್ಷುಲ್ಲಕ ಜಗಳದ ವೇಳೆ ಗುಂಡಿನ ಸದ್ದು ಕೇಳಿಬಂದಿದೆ.

Vijaya Karnataka Web 18 Nov 2020, 10:25 pm
ವಿಜಯಪುರ: ಭೀಮಾ ತೀರದ ಮಹಾದೇವ ಭೈರಗೊಂಡ ಮೇಲೆ ನಡೆದ ಶೂಟೌಟ್ ಪ್ರಕರಣದ‌ ಬೆನ್ನಲ್ಲೇ ಮತ್ತೆ ಗುಮ್ಮಟ ನಗರಿಯಲ್ಲಿ‌ ಗುಂಡಿನ ಸದ್ದು ಕೇಳಿಬಂದಿದೆ.
Vijaya Karnataka Web ಗುಂಡಿನ ಸದ್ದು
ಗುಂಡಿನ ಸದ್ದು


ಇಲ್ಲಿನ ಮನಗೂಳಿ ರಸ್ತೆಯಲ್ಲಿರುವ ಸ್ಮಶಾನದ ಬಳಿ ಬುಧವಾರ ರಾತ್ರಿ ನಡೆದಿದೆ.

ಬಾರಾಕೋಟ್ರಿ ತಾಂಡಾ ನಿವಾಸಿ ಪದ್ದು ರಾಠೋಡ್ ಎಂಬ ವ್ಯಕ್ತಿಗೆ ಗುಂಡು ತಗುಲಿದೆ. ತಕ್ಷಣ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಕುಡಿದ‌ ಅಮಲಿನಲ್ಲಿ‌ ಒಂದು ಸುತ್ತು ಗುಂಡು ಹಾರಿದೆ. ಗಾಯಾಳು ಪದ್ದುನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಲನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದೇವೆ.
ಅನುಪಮ‌ ಅಗರವಾಲ, ಎಸ್ಪಿ, ವಿಜಯಪುರ

ಕ್ಷುಲ್ಲಕ ಕಾರಣಕ್ಕಾಗಿ ಎರಡು‌ ಗುಂಪುಗಳ ಮಧ್ಯೆ ನಡೆದ‌ ಮಾತಿನ ಚಕಮಕಿ ವಿಕೋಪಕ್ಕೆ ಹೋದಾಗ ಗುಂಡಿನ ದಾಳಿ ನಡೆದಿದೆ ಎಂದು ಎಸ್ಪಿ ಅನುಪಮ ಅಗರವಾಲ ವಿಜಯ ಕರ್ನಾಟಕಕ್ಕೆ ತಿಳಿಸಿದರು.‌

ಗಲಾಟೆ ವೇಳೆ ಗುಂಡು ಹಾರಿಸಿದ ತುಳಸೀರಾಮ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಎಸ್ಪಿ ಅನುಪಮ ಅಗರವಾಲ, ಅಡಿಶನಲ್ ಎಸ್ಪಿ ರಾಮ್ ಅರಸಿದ್ದಿ ಭೇಟಿ ಪರಿಶೀಲನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ