ಆ್ಯಪ್ನಗರ

ಎಚ್ ವಿಶ್ವನಾಥ್‌ಗೆ ಏನು ಬೇಕಾಗಿದೆ ಎಂದೇ ಅರ್ಥವಾಗುತ್ತಿಲ್ಲ: ಆರ್ ವಿ ದೇಶಪಾಂಡೆ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರಿಗೆ ಏನು ಬೇಕಾಗಿದೆ ಎನ್ನುವುದೇ ಅರ್ಥ ಆಗುತ್ತಿಲ್ಲ. ದಿನಕ್ಕೊಂದು ಹೇಳಿಕೆ ನೀಡಿದರೆ ಏನರ್ಥ ಎಂದು ಕಂದಾಯ ಸಚಿವ ಆರ್ ವಿ ದೇಶಪಾಂಡೆ ಪ್ರಶ್ನಿಸಿದರು.

Vijaya Karnataka Web 19 May 2019, 10:48 am
ವಿಜಯಪುರ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರಿಗೆ ಏನು ಬೇಕಾಗಿದೆ ಎನ್ನುವುದೇ ಅರ್ಥ ಆಗುತ್ತಿಲ್ಲ. ದಿನಕ್ಕೊಂದು ಹೇಳಿಕೆ ನೀಡಿದರೆ ಏನರ್ಥ ಎಂದು ಕಂದಾಯ ಸಚಿವ ಆರ್ ವಿ ದೇಶಪಾಂಡೆ ಪ್ರಶ್ನಿಸಿದರು.
Vijaya Karnataka Web r v d


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರ ಅಸ್ತಿತ್ವದಲ್ಲಿರುವುದು ಇಷ್ಟವಿಲ್ಲ ಎಂದರೆ ವಿಶ್ವನಾಥ್ ತಮ್ಮ ವರಿಷ್ಠರಿಗೆ ತಿಳಿಸಲಿ. ಅದನ್ನು ಬಿಟ್ಟು ಏನೇನೋ ಮಾತನಾಡುವುದು ಸರಿಯಲ್ಲ. ಜವಾಬ್ದಾರಿಯಿಂದ ಮಾತನಾಡಬೇಕು ಎಂದು ತಿರುಗೇಟು ನೀಡಿದರು.

ಕೆಲವರು ಮಾಧ್ಯಮದಲ್ಲಿ ಬರಲು ಇಲ್ಲಸಲ್ಲದ ಹೇಳಿಕೆ ನೀಡುತ್ತಾರೆ ಎಂದು ಚಾಟಿ ಬೀಸಿದರು. ಸಮ್ಮಿಶ್ರ ಸರಕಾರ ಸುಭದ್ರವಾಗಿದ್ದು, ಕಾಂಗ್ರೆಸ್ ಎಲ್ಲ ರೀತಿಯ ಸಹಕಾರ ನೀಡುತ್ತಿದೆ ಎಂದು ಹೇಳಿದರು.

ಸಮ್ಮಿಶ್ರ ಸರಕಾರದ ನಡುವೆ ಬಾಂಧವ್ಯದ ಬೆಸುಗೆ ಹಾಕಬೇಕಾದ ಸಮನ್ವಯ ಸಮಿತಿಯ ಅಧ್ಯಕ್ಷ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರಿಯಾಗಿ ತಮ್ಮ ಜವಾಬ್ದಾರಿ ನಿರ್ವಹಣೆ ಮಾಡುತ್ತಿಲ್ಲ. ಮೈತ್ರಿ ಸರಕಾರ ಅಸ್ಥಿತ್ವಕ್ಕೆ ಬಂದು ಒಂದು ವರ್ಷ ಕಳೆದರೂ ಸಾಮಾನ್ಯ ಕನಿಷ್ಟ ಕಾರ್ಯಕ್ರಮವನ್ನು ಅಂತಿಮಗೊಳಿಸುವುದೂ ಸಿದ್ದರಾಮಯ್ಯ ಅವರಿಗೆ ಸಾಧ್ಯವಾಗಿಲ್ಲ,'' ಎಂದು ನೇರವಾಗಿಯೇ ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ