ಆ್ಯಪ್ನಗರ

ವಿಜಯಪುರ: ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು, ವಿದ್ಯುತ್ ಉತ್ಪಾದನೆ ಆರಂಭ

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ಕಾಣುತ್ತಿದೆ. ಈ ಕಾರಣದಿಂದ ಆಲಮಟ್ಟಿ ಜಲಾಶಯದ ಒಳಹರಿವು ಕೂಡ ಹೆಚ್ಚಾಗಿದ್ದು, ವಿದ್ಯುತ್‌ ಉತ್ಪಾದನೆ ಘಟಕದ ಮೂಲಕ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

Vijaya Karnataka Web 9 Jul 2020, 6:12 pm
ವಿಜಯಪುರ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾನದಿಗೆ ಹೆಚ್ಚುವರಿ ನೀರು ಹರಿದು ಬರುತ್ತಿದ್ದು, ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆ ಘಟಕದ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ.
Vijaya Karnataka Web rains in maharashtra increase almatti dam inflow
ವಿಜಯಪುರ: ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು, ವಿದ್ಯುತ್ ಉತ್ಪಾದನೆ ಆರಂಭ


ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಮಹಾರಾಷ್ಟ್ರದಿಂದ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ ಹೊರಹರಿವು ಹೆಚ್ಚಿಸಲಾಗಿದೆ
ಗುರುವಾರ ಜಲಾಶಯಕ್ಕೆ 10,088 ಕ್ಯೂಸೆಕ್ ನೀರು ಹರಿದು ಬಂದಿದೆ. 49 ಸಾವಿರ ಕ್ಯೂಸೆಕ್ ನೀರನ್ನು ವಿದ್ಯುತ್ ಘಟಕದ ಮೂಲಕ ಹೊರ ಬಿಡಲಾಗುತ್ತಿದೆ.

55 ಮೆಗಾವ್ಯಾಟ್ ಸಾಮರ್ಥ್ಯದ 2 ಘಟಕಗಳು ಕಾರ್ಯ ಆರಂಭಿಸಿವೆ. 70 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಮಳೆ ಚುರುಕುಗೊಂಡು ಜಲಾಶಯದ ಒಳಹರಿವು ಹೆಚ್ಚಾಗಿದ್ದರೂ ಸದ್ಯ ಪ್ರವಾಹ ಭೀತಿ ಇಲ್ಲ. ಮುನ್ನೆಚ್ಚರಿಕೆಯಾಗಿ ನದಿ ತಟದಲ್ಲಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಅವಧಿಗೂ ಮುನ್ನವೇ ಆಲಮಟ್ಟಿ ಡ್ಯಾಂ ಅರ್ಧ ಭರ್ತಿ..! ದಾರಿದ್ರ್ಯ ಕಳೆದ ಆರಿದ್ರಾ ಮಳೆ..!

ಕಳೆದ ವರ್ಷ 5 ಲಕ್ಷ ಕ್ಯೂಸೆಕ್ ನೀರು ಹರಿವು ಇದ್ದಾಗಲೂ 11 ಗ್ರಾಮಗಳನ್ನು ಮಾತ್ರ ನೀರು ಸುತ್ತುವರಿದಿತ್ತು. ಗ್ರಾಮದ ಒಳಗೆ ನೀರು ನುಸುಳಿರಲಿಲ್ಲ. ಈಗ 49,636 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ, ಪ್ರವಾಹದ ಆತಂಕ ಇಲ್ಲ ಎಂದು ತಿಳಿಸಿದರು. ಜಲಾಶಯಕ್ಕೆ ನೀರಿಕ್ಷಿತ ಪ್ರಮಾಣದಲ್ಲಿ ಒಳಹರಿವು ಇನ್ನೂ ಬಂದಿಲ್ಲ. ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಈಗಾಗಲೇ ನದಿ ಪಾತ್ರದ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ಹೇಳಿದರು.

ವಿಜಯಪುರದಲ್ಲಿ ದಾಖಲೆ ಮಳೆಯಿಂದ ಜಲಾತಂಕ..! ಮನೆ ಕುಸಿತ, ಅಪಾರ ಬೆಳೆ ಹಾನಿ

ಈಗಾಗಲೇ ತಾಲೂಕು ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರ ಮುಂದಾಳತ್ವದಲ್ಲಿ ಸಮಿತಿ ರಚಿಸಲಾಗಿದೆ. ಪ್ರತಿ ವರ್ಷ ಪ್ರವಾಹ ಪೀಡಿತ ಪ್ರದೇಶಗಳ ಗ್ರಾಮಸ್ಥರಿಗೆ ನೀರು ಯಾವ ಮಟ್ಟದವರೆಗೆ ಬರಬಹುದು ಎನ್ನುವ ಅಂದಾಜು ಇರುವ ಕಾರಣ, ತಕ್ಷಣ ಪ್ರವಾಹ ಎದುರಾದರೂ ಅದನ್ನು ನಿಭಾಯಿಸಲು ಅಧಿಕಾರಿಗಳು ಸಿದ್ಧರಿದ್ದಾರೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ