ಆ್ಯಪ್ನಗರ

ಟಿಟಿಇ ಮುಚ್ಚುವ ಶಿಫಾರಸು: ಖಂಡನೆ

Vijaya Karnataka 9 May 2019, 5:00 am
ವಿಜಯಪುರ: ರಾಜ್ಯದಲ್ಲಿರುವ 7 ಸರಕಾರಿ ಶಿಕ್ಷ ಕರ ತರಬೇತಿ ಸಂಸ್ಥೆಗಳ (ಟಿಟಿಇ) ಪೈಕಿ ಆರು ಶಿಕ್ಷ ಕರ ತರಬೇತಿ ಸಂಸ್ಥೆಗಳನ್ನು ಮುಚ್ಚಲು ರಾಜ್ಯ ಶಿಕ್ಷ ಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿರುವುದನ್ನು ಆಲ್‌ ಇಂಡಿಯಾ ಡೆಮೊಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌ (ಎಐಡಿವೈಓ) ಜಿಲ್ಲಾಧ್ಯಕ್ಷ ಸಿದ್ದಲಿಂಗ ಬಾಗೇವಾಡಿ ಬಲವಾಗಿ ಖಂಡಿಸಿದ್ದಾರೆ.
Vijaya Karnataka Web recommendation for closing tte condemnation
ಟಿಟಿಇ ಮುಚ್ಚುವ ಶಿಫಾರಸು: ಖಂಡನೆ


ಧಾರವಾಡದ ಸರಕಾರಿ ಮಹಿಳಾ ಶಿಕ್ಷ ಕಿಯರ ತರಬೇತಿ ಸಂಸ್ಥೆ, ಕಲಬುರಗಿ, ಮೈಸೂರು, ರಾಯಚೂರು ಜಿಲ್ಲೆಯ ಸಿಂಧನೂರು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಹಾಗೂ ಶಿರಾ ತಾಲೂಕಿನ ಚಿಕ್ಕನಹಳ್ಳಿಯಲ್ಲಿರುವ ಸಂಸ್ಥೆಗಳು ಸೇರಿವೆ. ಇದರ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಸೇವಾ ಪೂರ್ವ ತರಬೇತಿ ನೀಡುತ್ತಿದ್ದ ಸಂಸ್ಥೆಗಳನ್ನೂ ತಾತ್ಕಾಲಿಕವಾಗಿ ಮುಚ್ಚಲು ಹೊರಟಿರುವುದು ಅತ್ಯಂತ ಅಪ್ರಜಾತಾಂತ್ರಿಕ ಹಾಗೂ ಶಿಕ್ಷ ಣ ವಿರೋಧಿ ಕ್ರಮವಾಗಿದೆ ಎಂದು ಸಂಘಟನೆ ತಿಳಿಸಿದೆ. ಶಿಕ್ಷ ಣಕ್ಕೆ ಪ್ರೋತ್ಸಾಹ ನೀಡುತ್ತೇವೆ ಎಂದು ಬಣ್ಣದ ಮಾತುಗಳನ್ನಾಡುವ ಸರಕಾರ ಇನ್ನೊಂದೆಡೆ ಶಿಕ್ಷ ಣ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ಕೊಡುತ್ತಿರುವ ಈ ಸಂಸ್ಥೆಗಳನ್ನು ಮುಚ್ಚಲು ಹೊರಟಿರುವುದು ಜನವಿರೋಧಿ ಕ್ರಮವಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಸಾವಿರಾರು ಶಿಕ್ಷ ಕರ ಹುದ್ದೆಗಳು ಖಾಲಿ ಇದ್ದರೂ ಸರಕಾರ ಡಿಎಡ್‌ ಪೂರ್ಣಗೊಳಿಸಿದ ಶಿಕ್ಷ ಕರ ನೇಮಕಾತಿಗಳನ್ನು ಮಾಡಿಕೊಳ್ಳುತ್ತಿಲ್ಲ. ನೇಮಕಾತಿಗಳೇ ಇಲ್ಲದ ಕಾರಣ ಈ ತರಬೇತಿ ಸಂಸ್ಥೆಗಳಿಗೆ ಪ್ರಶಿಕ್ಷ ಣಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಆದರೆ ಇದನ್ನೇ ನೆಪವಾಗಿಟ್ಟುಕೊಂಡು ಸಂಸ್ಥೆಗಳನ್ನೇ ಮುಚ್ಚಲು ಹೊರಟಿರುವುದು ವಿಪರ್ಯಾಸದ ಸಂಗತಿ ಎಂದವರು ತಿಳಿಸಿದ್ದಾರೆ.

ಹಾಗಾಗಿ ಸರ್ಕಾರಿ ಶಿಕ್ಷ ಕರ ತರಬೇತಿ ಸಂಸ್ಥೆಗಳನ್ನು ಮುಚ್ಚುವ ಬದಲಿಗೆ ಉಳಿಸಿಕೊಳ್ಳಬೇಕು. ತರಬೇತಿ ಪಡೆದ ಪ್ರಶಿಕ್ಷ ಣಾರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಈ ಸಂಸ್ಥೆಗಳನ್ನು ಉಳಿಸಿಕೊಳ್ಳಲು ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿರುವ ಅವರು, ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ