ವಿಜಯಪುರ: 2018ರಲ್ಲಿ ಬಾದಾಮಿಯಲ್ಲಿ ನಾನು ಮಾಡಿದ ತಪ್ಪಿನಿಂದಲೇ ಸಿದ್ದರಾಮಯ್ಯ ಗೆದ್ದರು. ಆದರೆ 2023ಕ್ಕೆ ಅವರ ದುರಹಂಕಾರ ಕೊನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು. ವಿಜಯಪುರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಕುಮಾರಸ್ವಾಮಿ ಕರ್ಚೀಫ್ಗೆ ಗ್ಲಿಸರೀನ್ ಹಾಕಿಕೊಂಡು ಅಳ್ತಾರೆ ಎಂಬ ಟೀಕೆಗೆ ಪ್ರತ್ಯುತ್ತರ ನೀಡಿದ ಅವರು, ಕೈಯಲ್ಲಿದ್ದ ಕರ್ಚೀಫ್ ಮುಂದೆ ಹಿಡಿದು, “ನೋಡಿ ತಗೊಳ್ಳಿ ಇದರಲ್ಲೇನಿದೆ ನೋಡಿ” ಎಂದರು.
ನಮ್ಮ ಕುಟುಂಬದವರು ಭಾವನಾತ್ಮಕ ಜೀವಿಗಳು. ಭಾವನೆಗಳಿಂದಾಗಿ ಕಣ್ಣೀರು ಬರುತ್ತದೆ ಎಂದು ಗದ್ಗದಿತರಾದ ಕುಮಾರಸ್ವಾಮಿ, "ಕಣ್ಣೀರಿಗೆ ಗ್ಲಿಸರಿನ್ ಹಾಕ್ಕೋತಾರೆ ಅನ್ನೋದೆಲ್ಲ ಈ ಹಿಂದೆಯೇ ಹೇಳಿ ಬಿಟ್ಟಿದ್ದಾರೆ” ಎಂದು ಕಣ್ಣೀರ ಟೀಕೆಗೆ ಮತ್ತೆ ಕಣ್ತುಂಬಿಕೊಂಡೇ ಉತ್ತರ ಕೊಟ್ಟರು.
ಎಚ್.ಡಿ. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾವು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ದೇವೇಗೌಡರು ಮುಖ್ಯಮಂತ್ರಿ ಆಗುವ ವೇಳೆ ಸಿದ್ದರಾಮಯ್ಯ ಜನತಾದಳದ ಕಚೇರಿಗೆ ಬಂದಿರಲಿಲ್ಲ. ಅಂದು ಅವರು ಯಾವುದೋ ಖಾಸಗಿ ಹೊಟೇಲ್ನಲ್ಲಿ ಹೋಗಿ ಕುಳಿತಿದ್ದರು. ಅವರ ಜೊತೆ ಅಂದು ಎಷ್ಟು ಶಾಸಕರಿದ್ರು? ದೇವೇಗೌಡರನ್ನು ನಾನೇ ಸಿಎಂ ಮಾಡಿದ್ದು ಅಂತ ಸಿದ್ದರಾಮಯ್ಯ ಹೇಳೋದಾದರೆ, ದೇವೇಗೌಡರು ಪ್ರಧಾನಿಯಾಗಿ ಹೋದಾಗ ಇವರೇಕೆ ಸಿಎಂ ಆಗಲು ಸಾಧ್ಯವಾಗಲಿಲ್ಲ? ಎಂದು ಪ್ರಶ್ನಿಸಿದರು.
"ನಾನು ವಿಧಾನಸಭೆಯಲ್ಲೇ ಹೇಳಿದ್ದೇನೆ. ಒಂದು ಬಾರಿ ಸಿದ್ದರಾಮಯ್ಯ ಸಿಎಂ ಆಗದಂತೆ ಮಾಡಿದ್ದೇ ನಾನು. ಅಂದು ಸಿದ್ದರಾಮಯ್ಯ ಒಂದು ಸಭೆ ಮಾಡಿ ಜೆ.ಎಚ್. ಪಟೇಲರನ್ನು ರಾಜ್ಯಪಾಲರಾಗಿ ಕಳಿಸೋ ಪ್ಲಾನ್ ಮಾಡ್ತಿದ್ರು. ಆದರೆ ಆಗ ನಾನೇ ಎಂಟ್ರಿಯಾಗಿ ಅದನ್ನು ತಡೆದೆ," ಎಂದು ಹೇಳಿದರು.
ಡಿಎಂಕೆ ಜೊತೆ ಸೇರಿ ಸರ್ಕಾರ ಮಾಡಿದ ನಿಮ್ಮದ್ಯಾವ ಜಾತ್ಯಾತೀತತೆ? ಶಿವಸೇನೆ ಜೊತೆ ಸೇರಿ ಸರಕಾರ ರಚನೆ ಮಾಡಿರೋ ನಿಮ್ಮದ್ಯಾವ ಜಾತ್ಯಾತೀತತೆ ಸಿದ್ದರಾಮಯ್ಯನವರೇ? ಎಂದು ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಾನ್ಯಾಕೆ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದೆ? ಎಂದು ಆತ್ಮಾವಲೋಕನ ಮಾಡಿಕೊಂಡರು.
ನಾನು ಬಿಜೆಪಿ ಜೊತೆ ಹೋಗಿ ಸರ್ಕಾರ ಮಾಡುವಂತೆ ಮಾಡಿದ್ದೇ ಸಿದ್ದರಾಮಯ್ಯ. ಆಗ ಸಿದ್ದರಾಮಯ್ಯ ಜೆಡಿಎಸ್ ಮುಗಿಸಲು ಅಹಿಂದ ಮಾಡಿದರು. ಜೆಡಿಎಸ್ ಪಕ್ಷವನ್ನು ಉಳಿಸಲು ಅನಿವಾರ್ಯವಾಗಿ ಬಿಜೆಪಿ ಜೊತೆ ಕೈ ಜೋಡಿಸಿದೆ. ವಾಮನಾಚಾರ್ಯ, ಅಗ್ನಿ ಶ್ರೀಧರ್, ಅಭಿಮಾನಿ ಪ್ರಕಾಶನದ ಮಾಲೀಕರು ಅಂದು ಸಭೆ ಮಾಡಿದ್ದರು, ಅವರನ್ನು ಕೇಳಿ. ನವೀನ್ ಪಟ್ನಾಯಕ್ ಜೊತೆ ಒರಿಸ್ಸಾದಲ್ಲಿ ಮಾಡಿದಂತೆ ನಿಮ್ಮನ್ನೇ ಸಿಎಂ ಮಾಡ್ತೀವಿ ಅಂತ ಹೇಳಿ ಬಿಜೆಪಿಯವರೇ ದುಂಬಾಲು ಬಿದ್ದರು ಎಂದು ಎಚ್ಡಿಕೆ ವಿವರಿಸಿದರು.
ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಆಗೋ ಹುಚ್ಚು ಎಂದು ಕಿಡಿಕಾರಿದ ಕುಮಾರಸ್ವಾಮಿ, “ಸಿದ್ದರಾಮಯ್ಯ ನಾನು ಮುಖ್ಯಮಂತ್ರಿ ಆಗಲೇಬೇಕು ಅಂತ ಕರ್ನಾಟಕ ಭವನದಲ್ಲಿ ರಗ್ಗು ಹೊದ್ದು ಮಲಗಿದ್ದರು. ಆಗ ಅವರನ್ನು ಕರೆದುಕೊಂಡು ಬಂದವನು ನಾನು. ನಂತರ ಅವರು ಉಪಮುಖ್ಯಮಂತ್ರಿ ಆದರು. 1994ರಲ್ಲಿ ಜನತಾದಳ ಅಧಿಕಾರಕ್ಕೆ ಬರುವಲ್ಲಿ ಸಿದ್ದರಾಮಯ್ಯನವರಿಗಿಂತ ನನ್ನ ಕೊಡುಗೆ ಒಂದು ಕೈ ಹೆಚ್ಚಿದೆ. ನಾನು ರಾಜಕಾರಣದಿಂದ ದೂರ ಇದ್ದರೂ ಸಹ ನನ್ನದೇ ಆದ ರೀತಿಯಲ್ಲಿ ಕೆಲಸ ಮಾಡಿದ್ದೆ. ಹೀಗಾಗಿ ಅಂದು ಜನತಾದಳ ಅಧಿಕಾರಕ್ಕೆ ತರುವಲ್ಲಿ ಸಿದ್ದರಾಮಯ್ಯಗಿಂತ ನನ್ನ ಕೊಡುಗೆ ಹೆಚ್ಚಿದೆ," ಎಂದರು.
ನಮ್ಮ ಕುಟುಂಬದವರು ಭಾವನಾತ್ಮಕ ಜೀವಿಗಳು. ಭಾವನೆಗಳಿಂದಾಗಿ ಕಣ್ಣೀರು ಬರುತ್ತದೆ ಎಂದು ಗದ್ಗದಿತರಾದ ಕುಮಾರಸ್ವಾಮಿ, "ಕಣ್ಣೀರಿಗೆ ಗ್ಲಿಸರಿನ್ ಹಾಕ್ಕೋತಾರೆ ಅನ್ನೋದೆಲ್ಲ ಈ ಹಿಂದೆಯೇ ಹೇಳಿ ಬಿಟ್ಟಿದ್ದಾರೆ” ಎಂದು ಕಣ್ಣೀರ ಟೀಕೆಗೆ ಮತ್ತೆ ಕಣ್ತುಂಬಿಕೊಂಡೇ ಉತ್ತರ ಕೊಟ್ಟರು.
ಎಚ್.ಡಿ. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾವು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ದೇವೇಗೌಡರು ಮುಖ್ಯಮಂತ್ರಿ ಆಗುವ ವೇಳೆ ಸಿದ್ದರಾಮಯ್ಯ ಜನತಾದಳದ ಕಚೇರಿಗೆ ಬಂದಿರಲಿಲ್ಲ. ಅಂದು ಅವರು ಯಾವುದೋ ಖಾಸಗಿ ಹೊಟೇಲ್ನಲ್ಲಿ ಹೋಗಿ ಕುಳಿತಿದ್ದರು. ಅವರ ಜೊತೆ ಅಂದು ಎಷ್ಟು ಶಾಸಕರಿದ್ರು? ದೇವೇಗೌಡರನ್ನು ನಾನೇ ಸಿಎಂ ಮಾಡಿದ್ದು ಅಂತ ಸಿದ್ದರಾಮಯ್ಯ ಹೇಳೋದಾದರೆ, ದೇವೇಗೌಡರು ಪ್ರಧಾನಿಯಾಗಿ ಹೋದಾಗ ಇವರೇಕೆ ಸಿಎಂ ಆಗಲು ಸಾಧ್ಯವಾಗಲಿಲ್ಲ? ಎಂದು ಪ್ರಶ್ನಿಸಿದರು.
"ನಾನು ವಿಧಾನಸಭೆಯಲ್ಲೇ ಹೇಳಿದ್ದೇನೆ. ಒಂದು ಬಾರಿ ಸಿದ್ದರಾಮಯ್ಯ ಸಿಎಂ ಆಗದಂತೆ ಮಾಡಿದ್ದೇ ನಾನು. ಅಂದು ಸಿದ್ದರಾಮಯ್ಯ ಒಂದು ಸಭೆ ಮಾಡಿ ಜೆ.ಎಚ್. ಪಟೇಲರನ್ನು ರಾಜ್ಯಪಾಲರಾಗಿ ಕಳಿಸೋ ಪ್ಲಾನ್ ಮಾಡ್ತಿದ್ರು. ಆದರೆ ಆಗ ನಾನೇ ಎಂಟ್ರಿಯಾಗಿ ಅದನ್ನು ತಡೆದೆ," ಎಂದು ಹೇಳಿದರು.
ಡಿಎಂಕೆ ಜೊತೆ ಸೇರಿ ಸರ್ಕಾರ ಮಾಡಿದ ನಿಮ್ಮದ್ಯಾವ ಜಾತ್ಯಾತೀತತೆ? ಶಿವಸೇನೆ ಜೊತೆ ಸೇರಿ ಸರಕಾರ ರಚನೆ ಮಾಡಿರೋ ನಿಮ್ಮದ್ಯಾವ ಜಾತ್ಯಾತೀತತೆ ಸಿದ್ದರಾಮಯ್ಯನವರೇ? ಎಂದು ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಾನ್ಯಾಕೆ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದೆ? ಎಂದು ಆತ್ಮಾವಲೋಕನ ಮಾಡಿಕೊಂಡರು.
ನಾನು ಬಿಜೆಪಿ ಜೊತೆ ಹೋಗಿ ಸರ್ಕಾರ ಮಾಡುವಂತೆ ಮಾಡಿದ್ದೇ ಸಿದ್ದರಾಮಯ್ಯ. ಆಗ ಸಿದ್ದರಾಮಯ್ಯ ಜೆಡಿಎಸ್ ಮುಗಿಸಲು ಅಹಿಂದ ಮಾಡಿದರು. ಜೆಡಿಎಸ್ ಪಕ್ಷವನ್ನು ಉಳಿಸಲು ಅನಿವಾರ್ಯವಾಗಿ ಬಿಜೆಪಿ ಜೊತೆ ಕೈ ಜೋಡಿಸಿದೆ. ವಾಮನಾಚಾರ್ಯ, ಅಗ್ನಿ ಶ್ರೀಧರ್, ಅಭಿಮಾನಿ ಪ್ರಕಾಶನದ ಮಾಲೀಕರು ಅಂದು ಸಭೆ ಮಾಡಿದ್ದರು, ಅವರನ್ನು ಕೇಳಿ. ನವೀನ್ ಪಟ್ನಾಯಕ್ ಜೊತೆ ಒರಿಸ್ಸಾದಲ್ಲಿ ಮಾಡಿದಂತೆ ನಿಮ್ಮನ್ನೇ ಸಿಎಂ ಮಾಡ್ತೀವಿ ಅಂತ ಹೇಳಿ ಬಿಜೆಪಿಯವರೇ ದುಂಬಾಲು ಬಿದ್ದರು ಎಂದು ಎಚ್ಡಿಕೆ ವಿವರಿಸಿದರು.
ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಆಗೋ ಹುಚ್ಚು ಎಂದು ಕಿಡಿಕಾರಿದ ಕುಮಾರಸ್ವಾಮಿ, “ಸಿದ್ದರಾಮಯ್ಯ ನಾನು ಮುಖ್ಯಮಂತ್ರಿ ಆಗಲೇಬೇಕು ಅಂತ ಕರ್ನಾಟಕ ಭವನದಲ್ಲಿ ರಗ್ಗು ಹೊದ್ದು ಮಲಗಿದ್ದರು. ಆಗ ಅವರನ್ನು ಕರೆದುಕೊಂಡು ಬಂದವನು ನಾನು. ನಂತರ ಅವರು ಉಪಮುಖ್ಯಮಂತ್ರಿ ಆದರು. 1994ರಲ್ಲಿ ಜನತಾದಳ ಅಧಿಕಾರಕ್ಕೆ ಬರುವಲ್ಲಿ ಸಿದ್ದರಾಮಯ್ಯನವರಿಗಿಂತ ನನ್ನ ಕೊಡುಗೆ ಒಂದು ಕೈ ಹೆಚ್ಚಿದೆ. ನಾನು ರಾಜಕಾರಣದಿಂದ ದೂರ ಇದ್ದರೂ ಸಹ ನನ್ನದೇ ಆದ ರೀತಿಯಲ್ಲಿ ಕೆಲಸ ಮಾಡಿದ್ದೆ. ಹೀಗಾಗಿ ಅಂದು ಜನತಾದಳ ಅಧಿಕಾರಕ್ಕೆ ತರುವಲ್ಲಿ ಸಿದ್ದರಾಮಯ್ಯಗಿಂತ ನನ್ನ ಕೊಡುಗೆ ಹೆಚ್ಚಿದೆ," ಎಂದರು.