ಆ್ಯಪ್ನಗರ

ಅಧಿಕಾರಿ ಕೊಲೆಗೆ ಯತ್ನ

ಸಂಸ್ಥೆಯೊಂದರ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಸಹಾಯಕ ತೋಟಗಾರಿಕೆ ನಿರ್ದೇಶಕನ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಕನ್ನೂರ ಗ್ರಾಮದಲ್ಲಿ ನಡೆದಿದೆ...

Vijaya Karnataka 21 Oct 2018, 5:00 am
ವಿಜಯಪುರ: ಸಂಸ್ಥೆಯೊಂದರ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಸಹಾಯಕ ತೋಟಗಾರಿಕೆ ನಿರ್ದೇಶಕನ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಕನ್ನೂರ ಗ್ರಾಮದಲ್ಲಿ ನಡೆದಿದೆ.
Vijaya Karnataka Web the attempt to murder the officer
ಅಧಿಕಾರಿ ಕೊಲೆಗೆ ಯತ್ನ


ಬಸವನಬಾಗೇವಾಡಿ ತಾಲೂಕಿನ ತಾಳೆ ಬೆಳೆ ಯೋಜನೆಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಮೂಲತಃ ಕನ್ನೂರ ಗ್ರಾಮದ ಹಣಮಂತಗೌಡ ಪಾಟೀಲ ಗಾಯಗೊಂಡವರು.

ಗ್ರಾಮದ ಸಂತೋಷ ಪಾಟೀಲ, ಭೀಮಣ್ಣ ಗಂಗನಮಲ್ಲಿ, ಅಶೋಕ ಬರಕಡೆ, ಅಕ್ಷಯ ಜುಳಜುಳೆ ಆರೋಪಿಗಳು.

ಶುಕ್ರವಾರ ತಡರಾತ್ರಿ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಸಲುವಾಗಿ ಸಭೆ ನಡೆದಿತ್ತು. ಆಗ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಕುಪಿತಗೊಂಡ ಆರೋಪಿಗಳು ಹಣಮಂತಗೌಡ ಪಾಟೀಲಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೆ ಯತ್ನಿಸಿದ್ದಾರೆ. ಪ್ರಮುಖ ಆರೋಪಿ ಸಂತೋಷ ಪಾಟೀಲನನ್ನು ಬಂಧಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ