ಆ್ಯಪ್ನಗರ

ಉಪಚುನಾವಣೆ ಹೊತ್ತಲ್ಲಿ ಸಿಬಿಐ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ ; ಎಂಬಿ ಪಾಟೀಲ್

ಕೇಂದ್ರ ಸರ್ಕಾರ ಈ ದುರ್ಬಳಕೆ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದ ಎಂಬಿ. ಪಾಟೀಲ್, ಈ ಹಿಂದೆ ದಾಳಿ ಮಾಡಿದಾಗಲೂ‌ ಚುನಾವಣೆ‌ ಘೋಷಣೆಯಾಗಿತ್ತು. ಈಗಲೂ ಉಪ ಚುನಾವಣೆ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ದಾಳಿ ನಡೆಸುವುದು ಸರಿಯಲ್ಲ ಎಂದರು.

Vijaya Karnataka Web 7 Oct 2020, 10:55 am
ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿರೋದನ್ನು ಮಾಜಿ‌ ಸಚಿವ ಎಂಬಿ. ಪಾಟೀಲ ಖಂಡಿಸಿದ್ದಾರೆ.
Vijaya Karnataka Web MB Patil


ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ‌ ಸಚಿವ ಎಂಬಿ. ಪಾಟೀಲ್, ಉಪ ಚುನಾವಣೆ ಸಮಯದಲ್ಲಿ ಡಿಕೆ ಶಿವಕುಮಾರ್‌ ನಿವಾಸದ ಮೇಲೆ ದಾಳಿ ಮಾಡುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಕೇಂದ್ರ ಸರಕಾರ ಈ ಸಂಸ್ಥೆಗಳನ್ನು ದುರುಪಯೋಗ ‌ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಈ ದುರ್ಬಳಕೆ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದ ಎಂಬಿ. ಪಾಟೀಲ್, ಈ ಹಿಂದೆ ದಾಳಿ ಮಾಡಿದಾಗಲೂ‌ ಚುನಾವಣೆ‌ ಘೋಷಣೆಯಾಗಿತ್ತು. ಈಗಲೂ ಉಪ ಚುನಾವಣೆ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ದಾಳಿ ನಡೆಸುವುದು ಸರಿಯಲ್ಲ. ಇದು ರಾಜಕೀಯ ದುರುದ್ಧೇಶದಿಂದ ನಡೆದ ದಾಳಿ ಎಂದು ಖಂಡಿಸಿದರು.

ಮೀನಿನ ಉತ್ಪನ್ನ ಪೂರೈಕೆ ಹಾಗೂ ವಿತರಣೆಗೆ ಹೆಚ್ಚು ಒತ್ತು ನೀಡಬೇಕು : ಕೋಟ ಶ್ರೀನಿವಾಸ ಪೂಜಾರಿ

ಇನ್ನು ಕೊರೊನಾದಿಂದ ಸುರಕ್ಷಿತವಾಗಿರಬೇಕಾದರೆ‌ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದ ಅವರು, ಸ್ಯಾನಿಟೈಸ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಮೆರಿಕ ಅಧ್ಯಕ್ಷ ಟ್ರಂಪ್‌ಗೂ ಕೊರೊನಾ ಬಿಟ್ಟಿಲ್ಲ. ನಮ್ಮ‌ ಮನೆಯಲ್ಲಿ‌ ತಾಯಿಯವರಿಗೂ‌ ಬಂದಿತ್ತು. ಹಾಗಾಗಿ‌ ಎಲ್ಲರೂ ಜಾಗೃತಿ‌ಯಿಂದ ಇರಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ