ಆ್ಯಪ್ನಗರ

ಜಿಗಜಿಣಗಿ ಯೋಗ್ಯತೆ ಜನತೆಗೆ ಗೊತ್ತಿದೆ

ವಿಜಯಪುರ : ಕೇಂದ್ರ ಸಚಿವ ರಮೇಶ ಜಿಗಜಿಣಗಿ ಲೋಕಸಭೆಯಲ್ಲಿ ಒಂದೂ ಪ್ರಶ್ನೆಯನ್ನು ಕೇಳಿಲ್ಲ. ಸಚಿವರಾಗಿಯೂ ಹೇಳಿಕೊಳ್ಳುವಂತಹ ಕೆಲಸ ಮಾಡಿಲ್ಲ. ಅವರು ರಾಹುಲ್‌ಗಾಂಧಿ ಬಗ್ಗೆ ಮಾತನಾಡುವ ಮುನ್ನ ಮೊದಲು ತಮ್ಮ ಪಕ್ಷ ಅಧ್ಯಕ್ಷ ರ ಇತಿಹಾಸ ತಿಳಿದುಕೊಳ್ಳಲಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ತಿರುಗೇಟು ನೀಡಿದರು.

Vijaya Karnataka 31 Aug 2018, 5:00 am
ವಿಜಯಪುರ : ಕೇಂದ್ರ ಸಚಿವ ರಮೇಶ ಜಿಗಜಿಣಗಿ ಲೋಕಸಭೆಯಲ್ಲಿ ಒಂದೂ ಪ್ರಶ್ನೆಯನ್ನು ಕೇಳಿಲ್ಲ. ಸಚಿವರಾಗಿಯೂ ಹೇಳಿಕೊಳ್ಳುವಂತಹ ಕೆಲಸ ಮಾಡಿಲ್ಲ. ಅವರು ರಾಹುಲ್‌ಗಾಂಧಿ ಬಗ್ಗೆ ಮಾತನಾಡುವ ಮುನ್ನ ಮೊದಲು ತಮ್ಮ ಪಕ್ಷ ಅಧ್ಯಕ್ಷ ರ ಇತಿಹಾಸ ತಿಳಿದುಕೊಳ್ಳಲಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ತಿರುಗೇಟು ನೀಡಿದರು.
Vijaya Karnataka Web the people know the dignity
ಜಿಗಜಿಣಗಿ ಯೋಗ್ಯತೆ ಜನತೆಗೆ ಗೊತ್ತಿದೆ


ನಗರದಲ್ಲಿ ಗುರುವಾರ ಮಂಜುಳಾ ಫೌಂಡೇಶನ್‌ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಿಗಜಿಣಗಿ ಅವರು ಎಷ್ಟು ಯೋಗ್ಯ ವ್ಯಕ್ತಿ ಎಂಬುದು ಇಡೀ ಜಿಲ್ಲೆಯ ಜಿಲ್ಲೆಯ ಜನತೆಗೆ ಗೊತ್ತಿದೆ ಎನ್ನುವ ಮೂಲಕ ರಾಹುಲ್‌ ಗಾಂಧಿಗೆ ಅಯೋಗ್ಯ ಎಂದು ಕರೆದಿರುವ ಜಿಗಜಿಣಗಿ ಅವರ ಹೇಳಿಕೆಗೆ ಪ್ರತ್ಯುತ್ತರ ನೀಡಿದರು.

ಯತ್ನಾಳ ಬಾಯಿ ಬೊಂಬಾಯಿ :

ರಾಹುಲ್‌ ಗಾಂಧಿ ಅವರನ್ನು ಅರೆಹುಚ್ಚ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕರೆದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಎಂ.ಬಿ. ಪಾಟೀಲ, ಯತ್ನಾಳರ ಬಾಯಿ ಬೊಂಬಾಯಿ, ಅವರು ಎಷ್ಟು ಬುದ್ಧಿವಂತರಿದ್ದಾರೆಂಬುದು ಎಲ್ಲರಿಗೂ ಗೊತ್ತು. ಕಳೆದ ಬಾರಿ ಬಾಯಿ ಮುಚ್ಚಿಕೊಂಡಿದ್ದರಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದರು. ಈಗ ಪುನಃ ತಮ್ಮ ನಾಲಿಗೆ ಹರಿಬಿಟ್ಟರೆ ಪರಿಸ್ಥಿತಿ ಗಂಭೀರವಾಗಲಿದೆ ಎಂದರು.

ವಿಧಾನಪರಿಷತ್‌ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಯನ್ನು ನಾನು ಡಮ್ಮಿ ಎಂದು ಎಲ್ಲೂ ಟೀಕಿಸಿಲ್ಲ. ಅವರು ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಕಾಪೋರ್‍ರೇಟರ್‌. ಅವರು ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ವ್ಯಂಗವಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ