ಆ್ಯಪ್ನಗರ

ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾಪ ಇಲ್ಲ: ಸಚಿವ ಶ್ರೀಮಂತ ಪಾಟೀಲ ಸ್ಪಷ್ಟನೆ

ಇಲ್ಲಿ ಆಗದ ಕೆಲಸಕ್ಕೆ ಕೆಲವೊಮ್ಮೆ ಅನಿವಾರ್ಯವಾಗಿ ದಿಲ್ಲಿಗೆ ಹೋಗಬೇಕಾಗುತ್ತದೆ. ಅಲ್ಲಿಂದಲೇ ಅನುದಾನ ತಂದು ಕೆಲಸಗಳು ಮಾಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಅವರು ಹೋಗಿರಬಹುದು ಎಂದು ಲಕ್ಷ್ಮಣ ಸವದಿ ದಿಲ್ಲಿ ಭೇಟಿಯನ್ನು ಸಚಿವ ಶ್ರೀಮಂತ ಪಾಟೀಲ್‌ ಸ್ಪಷ್ಟಪಡಿಸಿದರು.

Vijaya Karnataka Web 29 Jul 2020, 11:25 pm
ವಿಜಯಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾಪವೇ ಇಲ್ಲ. ಈ ಬಗ್ಗೆ ನನ್ನ ಜತೆ ಯಾವ ಸಚಿವರು ಮಾತನಾಡಿಲ್ಲ ಎಂದು ಅಲ್ಪಸಂಖ್ಯಾತ, ಜವಳಿ, ಕೈಮೊಗ್ಗ ಸಚಿವ ಶ್ರೀಮಂತ ಪಾಟೀಲ ಹೇಳಿದರು.
Vijaya Karnataka Web ಶ್ರೀಮಂತ ಪಾಟೀಲ್‌
ಶ್ರೀಮಂತ ಪಾಟೀಲ್‌


ಬುಧವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಯಾಬಿನೆಟ್‌ನಲ್ಲಿ ಇದ್ದೇನೆ. ಶಾಸಕರೊಂದಿಗೆ ಉತ್ತಮ ಒಡನಾಟವಿದೆ. ಎಲ್ಲೂ ಚರ್ಚೆ ಆಗಿಲ್ಲ ಎಂದರು.

ಕೆಲವರಿಗೆ ಬೇಸರ ಇರುತ್ತೆ ನಿಜ, ಅವರು ಏನಾದರೂ ಮಾತನಾಡಿದರೆ ಅದೇ ದೊಡ್ಡ ವಿಷಯವಾಗುತ್ತದೆ ಎಂದು‌ ಮಾಧ್ಯಮವನ್ನೇ ಪರೋಕ್ಷವಾಗಿ ಟೀಕಿಸಿದರು.

ಡಿಸಿಎಂ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ ದಿಲಿಗೆ ಹೋಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೆಲಸದ ಹಿನ್ನಲೆಯಲ್ಲಿ ಹೋಗಿರಬೇಕು. ಅವರು ಎಲ್ಲಿಯಾದರೂ ನಾನು ಸಿಎಂ ಆಗಬೇಕು ಎಂದು ಹೇಳಿದ್ದಾರಾ...? ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಇಲ್ಲಿ ಆಗದ ಕೆಲಸಕ್ಕೆ ಕೆಲವೊಮ್ಮೆ ಅನಿವಾರ್ಯವಾಗಿ ದಿಲ್ಲಿಗೆ ಹೋಗಬೇಕಾಗುತ್ತದೆ. ಅಲ್ಲಿಂದಲೇ ಅನುದಾನ ತಂದು ಕೆಲಸಗಳು ಮಾಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಅವರು ಹೋಗಿರಬಹುದು ಎಂದು ಲಕ್ಷ್ಮಣ ಸವದಿ ದಿಲ್ಲಿ ಭೇಟಿಯನ್ನು ಸಚಿವ ಶ್ರೀಮಂತ ಪಾಟೀಲ್‌ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ