ಆ್ಯಪ್ನಗರ

ವಿಜಯಪುರದಲ್ಲಿ ಒಂಟಿ ವೃದ್ಧೆಯನ್ನು ಉಸಿಗಟ್ಟಿಸಿ ಕೊಂದ ದುಷ್ಕರ್ಮಿಗಳು

ವಿಜಯಪುರದಲ್ಲಿ ಶಾಸೀ ನಗರದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ವೃದ್ದೆ ಮನೆಗೆ ಭಾನುವಾರ ತಡರಾತ್ರಿ ದಾಳಿ ನಡೆಸಿರುವ ದುಷ್ಕರ್ಮಿಗಳು ವೃದ್ಧಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

Vijaya Karnataka Web 14 Oct 2019, 3:15 pm
ವಿಜಯಪುರ: 70 ವರ್ಷದ ವಯೋವೃದ್ಧೆಯನ್ನು ದುಷ್ಕರ್ಮಿಗಳು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾದ ಘಟನೆ ಇಲ್ಲಿನ ಶಾಸಿನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಶಾಸೀನಗರ ನಿವಾಸಿ ರೇಖಾ ಶಿವಶಂಕರ ದೇಶಮಾನೆ (69) ಕೊಲೆಗೀಡಾದ ವೃದ್ಧೆ.
Vijaya Karnataka Web old women killed


ದಾದಾಸಾಹೇಬ್‌ ಫಾಲ್ಕೆ ಪುರಸ್ಕೃತ ಅಮಿತಾಬ್‌ ಎಂಬ ಜೀವಂತ ದಂತಕತೆ

ಮನೆಯಲ್ಲಿ ವೃದ್ಧೆ ಒಬ್ಬಂಟಿಯಾಗಿ ವಾಸವಾಗಿದ್ದರು. ರಾತ್ರಿ ವೇಳೆ ನಿದ್ರೆಯ ಮಂಪರಿನಲ್ಲಿದ್ದ ವೃದ್ಧೆಯನ್ನು ಸೀರೆಯಿಂದ ಕಟ್ಟಿ ಹಾಕಿ, ಬಳಿಕ ಕತ್ತಿಗೆ ಹಗ್ಗದಿಂದ ನೇಣು ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿರುವ ಎಸ್ಪಿ ಪ್ರಕಾಶ ನಿಕ್ಕಂ ವಿಜಯ ಕರ್ನಾಟಕಕ್ಕೆ ತಿಳಿಸಿದರು.

ಮೈಸೂರಿನ ಹುಡುಗಿಗೆ ಒಲಿಯಿತು 'ವಿಕ ನವತಾರೆ 2019' ಪಟ್ಟ; ಯಾರು ಅವರು?

ಬೆರಳಚ್ಚು ತಜ್ಞರು ಹಾಗೂ ಶ್ವಾನದಳದಿಂದ ಪರಿಶೀಲಿಸಿ, ತನಿಖೆ ಕೈಗೊಳ್ಳುವುದಾಗಿ ಎಸ್ಪಿ ತಿಳಿಸಿದರು. ಗಾಂಧಿವೃತ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ