ಆ್ಯಪ್ನಗರ

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ‌ ಗಡಿಯಲ್ಲಿ ವಿಜಯಪುರದ ಯೋಧ ಹುತಾತ್ಮ

ವಿಜಯಪುರ ಜಿಲ್ಲೆಯ ಕರ್ತವ್ಯ ನಿರತ ಬಿಎಸ್ಎಫ್ ಯೋಧನೊಬ್ಬ ವಿದ್ಯುತ್ ತಗುಲಿ ಸಾವಿಗೀಡಾದ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಯೋಧ ಶಿವಾನಂದ ಜಗನ್ನಾಥ ಬಡಿಗೇರ (29) ಹುತಾತ್ಮನಾದ ಯೋಧ.

Vijaya Karnataka Web 30 Aug 2020, 11:52 pm
ವಿಜಯಪುರ (ಢವಳಗಿ): ಸಮೀಪದ ಬಸರಕೋಡ ಗ್ರಾಮದ ಯೋಧ ಜಮ್ಮು ಕಾಶ್ಮಿರದ ಗಡಿ ಭದ್ರತಾ ಪಡೆಯಲ್ಲಿ ಎಲೆಕ್ಟ್ರಿಕ್‌ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿವಾನಂದ ಜಗನ್ನಾಥ ಬಡಿಗೇರ (29) ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
Vijaya Karnataka Web vijayapura soldier martyred by electric short circuit in jammu kashmir
ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ‌ ಗಡಿಯಲ್ಲಿ ವಿಜಯಪುರದ ಯೋಧ ಹುತಾತ್ಮ


ಜಮ್ಮು ಕಾಶ್ಮೀರದ ಬಿಎಸ್‌ಎಫ್‌ ಹೌಸ್‌ನಲ್ಲಿ ವಿದ್ಯುತ್‌ ದುರಸ್ತಿ ಮಾಡುವಾಗ ಈ ದುರಂತ ಸಂಭವಿಸಿದೆ ಎಂದು ಬಿಎಸ್‌ಎಫ್‌ನ ಹಿರಿಯ ಅಧಿಕಾರಿಗಳು ಮೃತನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಜಗನ್ನಾಥ ಬಡಿಗೇರ 9 ವರ್ಷಗಳ ಹಿಂದೆ ಬಿಎಸ್‌ಎಫ್‌ಗೆ ಸೇರಿದ್ದರು.

ವರ್ಷದ ಹಿಂದೆ ಜಗನ್ನಾಥ ಅವರಿಗೆ ಮದುವೆಯಾಗಿದ್ದು ಪತ್ನಿ, ತಂದೆ, ತಾಯಿ, ಮೂವರು ಸಹೋದರರು, ಸಹೋದರಿ ಇದ್ದಾರೆ. ಇವರ ಹಿರಿಯಣ್ಣನೂ ಸೇನೆಯಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಇಲ್ಲವೇ ಬುಧವಾರ ಮೃತನ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಬರಲಿರುವುದಾಗಿ ಬಿಎಸ್‌ಎಫ್‌ನ ಹಿರಿಯ ಅಧಿಕಾರಿಗಳು ಮೃತನ ಕುಟುಂಬಕ್ಕೆ ಕರೆಮಾಡಿ ತಿಳಿಸಿದ್ದಾರೆ ಎಂದು ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನ ಅಮಿತಿ ಅಧ್ಯಕ್ಷ ಕೆ.ವೈ.ಬಿರಾದಾರ ವಿಜಯ ಕರ್ನಾಟಕಕ್ಕೆ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮತ್ತೆ 127 ಮಂದಿಗೆ ಕೊರೊನಾ ದೃಢ: ನಾಲ್ಕು ಮಂದಿ ಸಾವು!

ಮಗನ ಸಾವಿನ ಸುದ್ದಿ ತಿಳಿದ ತಂದೆ, ತಾಯಿ ಇಬ್ಬರೂ ಕೆಲ ಕಾಲ ಪ್ರಜ್ಞೆ ಕಳೆದುಕೊಂಡು ಕುಟುಂಬದಲ್ಲಿ ಆತಂಕ ಮೂಡಿಸಿದ್ದರು. ನಂತರ ಕುಟುಂಬದ ಸದಸ್ಯರು, ಅಕ್ಕಪಕ್ಕದವರ ಉಪಚಾರದಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ಆ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟುವಂತಿದೆ.

ವಿಜಯಪುರ: ಜನೌಷಧಕ್ಕಿಂತ ಖಾಸಗಿ ಮಾತ್ರೆ ಹತ್ತು ಪಟ್ಟು ತುಟ್ಟಿ, ಸಾಮಾನ್ಯರಿಗಿಲ್ಲ ಜನೌಷಧ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ