ಆ್ಯಪ್ನಗರ

ಬರ ಊರಿನ ಜಲ ಗ್ರಾಮ

ವಿಜಯಪುರ : ಕೆರೆಗಳಿರದ ಗ್ರಾಮಗಳಿಲ್ಲ. ಆದರೆ ಒಂದೇ ಗ್ರಾಮದಲ್ಲಿ ಮೂರು ಕೆರೆಗಳು ಭರ್ತಿಯಾಗುವ ಮೂಲಕ ಜಲ ಗ್ರಾಮವಾಗಲಿದೆ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ .

Vijaya Karnataka 16 Feb 2019, 5:00 am
ವಿಜಯಪುರ : ಕೆರೆಗಳಿರದ ಗ್ರಾಮಗಳಿಲ್ಲ. ಆದರೆ ಒಂದೇ ಗ್ರಾಮದಲ್ಲಿ ಮೂರು ಕೆರೆಗಳು ಭರ್ತಿಯಾಗುವ ಮೂಲಕ ಜಲ ಗ್ರಾಮವಾಗಲಿದೆ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ .
Vijaya Karnataka Web water village of drought
ಬರ ಊರಿನ ಜಲ ಗ್ರಾಮ


ಈ ಕುಗ್ರಾಮದಲ್ಲಿ ಒಂದಲ್ಲ, ಎರಡಲ್ಲ. ಮೂರು ಕೆರೆಗಳನ್ನು ಹೊಂದುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಬರದ ನಾಡು ಎಂದೇ ವಿಜಯಪುರ ಜಿಲ್ಲೆ ಖ್ಯಾತಿಯಾಗಿದೆ. ಆದರೆ ಕೆರೆ ತುಂಬಿಸುವ ಯೋಜನೆ ಜಾರಿ ಆದಾಗಿನಿಂದ ಹಿಂದಿನ ಜಲಸಂಪನ್ಮೂಲ ಸಚಿವ ಹಾಗೂ ಹಾಲಿ ಗೃಹ ಸಚಿವ ಎಂ.ಬಿ.ಪಾಟೀಲ ಪ್ರತಿನಿಧಿಸುವ ಬಬಲೇಶ್ವರ ವಿಧಾನಸಭೆ ಕ್ಷೇತ್ರದ ಕೆರೆಗಳಿಗೆ ದೂರದ ಕೃಷ್ಣಾ ನದಿಯಿಂದ ನೀರೆತ್ತಿ ತುಂಬಿಸಲಾಗುತ್ತಿದೆ. ಹೀಗಾಗಿ ಹಲವು ಕೆರೆಗಳು ನೀರಿನಿಂದ ಕಂಗೊಳಿಸುತ್ತಿವೆ.

ಸೋಮದೇವರಹಟ್ಟಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ನಿರ್ಮಾಣಕ್ಕೆ ಗೃಹ ಸಚಿವ ಎಂ.ಬಿ.ಪಾಟೀಲ ಸೋಮವಾರ ಶಂಕುಸ್ಥಾಪನೆ ನೆರೆವೇರಿಸಲಿದ್ದು, ಈ ಕೆರೆ ನಿರ್ಮಾಣದಿಂದ ಒಂದೇ ಗ್ರಾಮದಲ್ಲಿ ಮೂರು ಕೆರೆಗಳನ್ನು ಹೊಂದಿದ ಹೆಮ್ಮೆ ಈ ಗ್ರಾಮಕ್ಕೆ ದೊರಕಲಿದೆ.

ಅತ್ಯಂತ ಎತ್ತರದ ಪ್ರದೇಶವಾದ ತಿಕೋಟಾ ಹೋಬಳಿಯಲ್ಲಿಯೇ ಇನ್ನು ಎತ್ತರವಾಗಿರುವ ಗುಡ್ಡಗಾಡು ಪ್ರದೇಶ ಸೋಮದೇವರಹಟ್ಟಿ. ಇಲ್ಲಿ ಪ್ರಥಮವಾಗಿ ಕೆರೆ ನಿರ್ಮಾಣವಾಗಿದ್ದು, ಕಾಖಂಡಕಿಯ ಜಿ.ಎನ್‌.ಪಾಟೀಲ 1974ರಲ್ಲಿ ತಿಕೋಟಾ ಶಾಸಕರಾಗಿದ್ದ ವೇಳೆ 2.88ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಕೆರೆ ಇಂದಿಗೂ 200 ಎಕರೆಗೂ ಹೆಚ್ಚು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿದೆ. 2007ರಲ್ಲಿ ಈ ಗ್ರಾಮದಲ್ಲಿ ಅಂದು ತಿಕೋಟಾ ಶಾಸಕರಾಗಿದ್ದ ಎಂ.ಬಿ.ಪಾಟೀಲ 30ಲಕ್ಷ ರೂ. ವೆಚ್ಚದಲ್ಲಿ ಕೆರೆ ನಿರ್ಮಿಸಿದ್ದು, ಇದು ನೂರು ಎಕರೆ ಪ್ರದೇಶಕ್ಕೆ ನೀರಾವರಿ ಒದಗಿಸುತ್ತದೆ.

3ನೇ ಕೆರೆ ಭರ್ತಿ :

ಇದೀಗ ಈ ಗ್ರಾಮದಲ್ಲಿ ನಿರ್ಮಿಸುತ್ತಿರುವ ಸೈಟ್‌-3 ಕೆರೆ, 91ಲಕ್ಷ ರೂ. ವೆಚ್ಚದಲ್ಲಿ 9ತಿಂಗಳು ಅವಧಿಯಲ್ಲಿ ನಿರ್ಮಾಣವಾಗಲಿದೆ. ಈ ಕೆರೆ ಉದ್ದ 130ಮೀಟರ್‌ ಆಗಿದ್ದು, 8.18ಮೀಟರ್‌ ಎತ್ತರವಿದೆ. 2 ಎಂಸಿಎಫ್‌ಟಿ ನೀರು ಶೇಖರಣಾ ಸಾಮರ್ಥ್ಯ ಹೊಂದಿದ್ದು, 35ಮೀಟರ್‌ ಕೋಡಿ ಇದೆ. ಈ ಎಲ್ಲ ಕೆರೆಗಳನ್ನು ತುಬಚಿ-ಬಬಲೇಶ್ವರ ಏತನೀರಾವರಿ ಯೋಜನೆಯ ಕಾಲುವೆ ಜಾಲದ ಮುಖಾಂತರ ಈ ಕೆರೆಗಳನ್ನು ತುಂಬಿಸಲಾಗುತ್ತದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ