ಆ್ಯಪ್ನಗರ

ಸಿಎಂ ಮತ್ತು ನಾನು ಅಣ್ಣ-ತಮ್ಮ: ಇಬ್ರಾಹಿಂ

ರಾಜ್ಯ ಯೋಜನಾ ಉಪಾಧ್ಯಕ್ಷ ಹಾಗೂ ಮೇಲ್ಮನೆ ಸದಸ್ಯ ಸಿಎಂಇಬ್ರಾಹಿಂ ಅವರನ್ನು ಸಿಎಂ ಸಿದ್ದರಾಮಯ್ಯ ಶನಿವಾರ ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿದರು...

Vijaya Karnataka 11 Feb 2018, 10:23 am

ಬೆಂಗಳೂರು: ರಾಜ್ಯ ಯೋಜನಾ ಉಪಾಧ್ಯಕ್ಷ ಹಾಗೂ ಮೇಲ್ಮನೆ ಸದಸ್ಯ ಸಿ.ಎಂ.ಇಬ್ರಾಹಿಂ ಅವರನ್ನು ಸಿಎಂ ಸಿದ್ದರಾಮಯ್ಯ ಶನಿವಾರ ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿದರು.

ಇಬ್ರಾಹಿಂ ಸದ್ಯದಲ್ಲೇ ಕಾಂಗ್ರೆಸ್‌ ತೊರೆದು ಜೆಡಿಎಸ್‌ಗೆ ಮರಳಲು ಉತ್ಸುಕರಾಗಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿತ್ತು. ಸಿಎಂ ನಿವಾಸ 'ಕಾವೇರಿ'ಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ ''ಸಿಎಂ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಅಣ್ಣ -ತಮ್ಮಂದಿರಂತಿದ್ದೇವೆ. ಯಾವ ಕಾರಣಕ್ಕೂ ಕಾಂಗ್ರೆಸ್‌ ತೊರೆಯುವುದಿಲ್ಲ'' ಎಂದು ಸ್ಪಷ್ಟಪಡಿಸಿದರು.

Vijaya Karnataka Web cm and i are brothers c m ibrahim
ಸಿಎಂ ಮತ್ತು ನಾನು ಅಣ್ಣ-ತಮ್ಮ: ಇಬ್ರಾಹಿಂ



''ಜೆಡಿಎಸ್‌ ವರಿಷ್ಠ ದೇವೇಗೌಡರೊಂದಿಗೆ ನನ್ನ ಸಂಬಂಧ ಉತ್ತಮವಾಗಿದೆ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಮಾತ್ರಕ್ಕೇ ಪಕ್ಷ ಬಿಡುತ್ತೇನೆ ಎಂದು ಅರ್ಥವಲ್ಲ. ಚುನಾವಣಾ ಮೈತ್ರಿ ಮತ್ತಿತರ ವಿಚಾರಗಳು ಹೈಕಮಾಂಡ್‌ ವಿವೇಚನೆಗೆ ಬಿಟ್ಟದ್ದು. ನಾನಂತೂ ಕಾಂಗ್ರೆಸ್‌ ಬಿಡುತ್ತಿಲ್ಲ. ರಾಹುಲ್‌ಗಾಂಧಿ ಅವರು ಕೈಗೊಂಡಿರುವ ರಾಜ್ಯ ಪ್ರವಾಸದಲ್ಲಿ ನಾನೂ ಭಾಗವಹಿಸುತ್ತಿದ್ದೇನೆ'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ